ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm