ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm