ಬ್ರೇಕಿಂಗ್ ನ್ಯೂಸ್
06-02-24 09:33 pm Udupi Correspondent ಕರಾವಳಿ
ಉಡುಪಿ, ಫೆ.6: ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಹತ್ತು ವರ್ಷಗಳ ಬಳಿಕ ನಕ್ಸಲರ ಚಲನವಲನ ಪತ್ತೆಯಾಗಿರುವುದನ್ನು ಪೊಲೀಸ್ ಮೂಲಗಳು ದೃಢಪಡಿಸಿವೆ. ಒಂದು ತಿಂಗಳಿನಿಂದ ಈ ಭಾಗದಲ್ಲಿ ನಾಲ್ವರಿದ್ದ ತಂಡ ಓಡಾಡುತ್ತಿದ್ದು ಹಳ್ಳಿ ಭಾಗದ ಜನರಿಂದ ಪೊಲೀಸರ ಗಮನಕ್ಕೆ ಬಂದಿದೆ.
ಯೂನಿಫಾರಂ ಹಾಕಿದ ನಾಲ್ವರಿದ್ದ ತಂಡ ಈ ಪರಿಸರದ ಕೆಲವು ಮನೆಗಳಿಗೆ ಭೇಟಿ ಮಾಡಿದೆ. ನಾಲ್ವರ ಪೈಕಿ ಇಬ್ಬರಲ್ಲಿ ಶಸ್ತ್ರಾಸ್ತ್ರಗಳಿದ್ದವು ಎನ್ನಲಾಗಿದೆ. ಕೆಲವು ಮನೆಯವರು ನಕ್ಸಲರ ಭೇಟಿಗೆ ಅವಕಾಶ ನೀಡಿಲ್ಲ. ಕೆಲವು ಮನೆಯವರ ಬಳಿ ರಾತ್ರಿ ವೇಳೆ ಕಿಟಕಿಯಿಂದಷ್ಟೇ ಮಾತಾಡಿ ಹೋಗಿದ್ದಾರೆ. ಎರಡು ದಿನಗಳ ಹಿಂದೆಯೂ ಕೆಲವು ಮನೆಗಳಿಗೆ ಇವರು ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕೇರಳ ಭಾಗದಲ್ಲಿ ನಕ್ಸಲ್ ಚಟುವಟಿಕೆಗೆ ಪೊಲೀಸರ ನಿರಂತರ ಕಾರ್ಯಾಚರಣೆಯಿಂದ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲರು ಇದೀಗ ಕರ್ನಾಟಕಕ್ಕೆ ಬಂದಿರುವ ಸಾಧ್ಯತೆಯಿದ್ದು ಕುಂದಾಪುರ ಭಾಗದಲ್ಲಿ ಚಟುವಟಿಕೆ ಆರಂಭಿಸಿರುವ ಅನುಮಾನ ದಟ್ಟವಾಗಿದೆ. ಇಲ್ಲಿನ ಪರಿಸರದ ಮನೆಗಳಿಗೆ ಪೊಲೀಸರು ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಿದ್ದಾರೆ. ಹತ್ತು ವರ್ಷಗಳ ಹಿಂದೆ ಎಎನ್ಎಫ್ ನಿರಂತರ ಕಾರ್ಯಾಚರಣೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗೆ ಬ್ರೇಕ್ ಬಿದ್ದಿತ್ತು. ಅಲ್ಲದೆ, ಕರ್ನಾಟಕದ ಪ್ರಮುಖ ನಕ್ಸಲ್ ನಾಯಕರು ಕೇರಳದ ವಯನಾಡಿನಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದರು.
ನಕ್ಸಲ್ ನಿಗ್ರಹದ ಕಾರಣಕ್ಕೆ ಸ್ಥಾಪಿಸಿದ್ದ ಏಂಟಿ ನಕ್ಸಲ್ ಫೋರ್ಸ್ ಕಾರ್ಕಳದಲ್ಲಿ ಠಿಕಾಣಿ ಹೂಡಿದ್ದರೂ, ಕಳೆದ ಐದಾರು ವರ್ಷಗಳಲ್ಲಿ ಕೆಲಸ ಇಲ್ಲದೆ ಕುಳಿತು ಬಿಟ್ಟಿದೆ. ಹಾಗಿದ್ದರೂ ಎಎನ್ಎಫ್ ಪಡೆಯನ್ನು ಸರ್ಕಾರ ಹಿಂದಕ್ಕೆ ಕರೆಸಿಕೊಂಡಿಲ್ಲ. ಗಲಭೆ ಇನ್ನಿತರ ತುರ್ತು ಸಂದರ್ಭದಲ್ಲಿ ಅಗತ್ಯ ಬಿದ್ದರೆ ಕಾರ್ಯಾಚರಣೆಗೆಂದು ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಬೈಂದೂರಿನ ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳಲ್ಲಿ ಕೇಳಿದರೆ, ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಯಾರೋ ಟೂರಿಸ್ಟ್ ಆಗಿರಬಹುದೆಂದು ಹಾರಿಕೆಯ ಉತ್ತರವನ್ನು ನೀಡುತ್ತಿದ್ದಾರೆ. ಆದರೆ ಹಸುರು ಬಣ್ಣದ ಯೂನಿಫಾರ್ಮ್ ಮತ್ತು ಶಸ್ತ್ರಾಸ್ತ್ರ ಇತ್ತೆನ್ನುವ ವಿಚಾರ ನಕ್ಸಲರು ಎನ್ನುವುದನ್ನು ಒತ್ತಿ ಹೇಳುತ್ತಿವೆ.
Naxalites with weapons found at Byndoor in Udupi.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm