ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm