ಬ್ರೇಕಿಂಗ್ ನ್ಯೂಸ್
07-02-24 04:25 pm Mangalore Correspondent ಕರಾವಳಿ
ಉಳ್ಳಾಲ, ಫೆ.7: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಸ್ಪೀಕರ್ ಯು.ಟಿ.ಖಾದರ್ ಆಪ್ತ, ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪರೂಪದ ಪ್ರಾಮಾಣಿಕ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪದ್ಮನಾಭ ಅವರು ಸಾಮಾನ್ಯ ಬಡತನದ ಕುಟುಂಬದಿಂದ ಬಂದು ತನ್ನ ಅಪರಿಮಿತ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಎರಡು ಬಾರಿ ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದರು.
ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಜನಾನುರಾಗಿಯಾಗಿದ್ದರು. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ (2023) ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಪದ್ಮನಾಭರಿಗೆ ಲಭಿಸಿತ್ತು. ಪದ್ಮನಾಭರ ಮಗ ಮೋಹನ್ ಅವರು ಸರಕಾರಿ ವಾಹನ ಚಾಲಕರು. ಮೋಹನ್ ಸ್ಪೀಕರ್ ಯು.ಟಿ.ಖಾದರ್ ಸಚಿವರಾಗಿದ್ದಾಗಲೂ ಅವರಿಗೆ ಚಾಲಕರಾಗಿದ್ದರು. ಈಗ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕಾರು ಚಾಲಕರಾಗಿದ್ದಾರೆ. ಮಗ ಜಿಲ್ಲಾಧಿಕಾರಿಯ ಕಾರು ಚಾಲಕನಾದರೂ ಅದರ ಯಾವುದೇ ಲಾಭ ಪಡೆಯದ ಪದ್ಮನಾಭರು ಸಿಂಪಲ್ ಆಗಿದ್ದರು.
ಹಿಂದಿನ ಕಮ್ಯೂನಿಸ್ಟ್ ಧುರೀಣ ಮಹಾಬಲೇಶ್ವರ ಭಟ್ಟರ ಪ್ರೇರಣೆಯಿಂದ ಕಮ್ಯೂನಿಸ್ಟ್ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿದ ಪದ್ಮನಾಭ ಅವರು ಅನೇಕ ವರ್ಷಗಳ ಕಾಲ ಸಿಪಿಐ ಪಕ್ಷದಲ್ಲಿ ಸಕ್ರಿಯವಾಗಿ ದುಡಿದವರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ನರಿಂಗಾನ ಕಂಬಳ ಸಮಿತಿಯ ಗೌರವ ಸಲಹೆಗಾರರೂ, ಅಹಿಂದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಇದ್ದಾರೆ.
ಫೆ.8ರ ಗುರುವಾರ(ನಾಳೆ) ಬೆಳಗ್ಗೆ 10 ಗಂಟೆಗೆ ಪದ್ಮನಾಭರ ನರಿಂಗಾನದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಬಳಿಕ ಅಂತ್ಯಕ್ರಿಯೆ ನಡೆಯಲಿದೆಯೆಂದು ಕುಟುಂಬಸ್ಥರು ತಿಳಿಸಿದ್ದಾರೆ.
Mangalore Congress senior leader Padmanaba Naringana close member of speaker UT Khader dies at 77
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm