ಬ್ರೇಕಿಂಗ್ ನ್ಯೂಸ್
07-02-24 04:25 pm Mangalore Correspondent ಕರಾವಳಿ
ಉಳ್ಳಾಲ, ಫೆ.7: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಸ್ಪೀಕರ್ ಯು.ಟಿ.ಖಾದರ್ ಆಪ್ತ, ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪರೂಪದ ಪ್ರಾಮಾಣಿಕ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪದ್ಮನಾಭ ಅವರು ಸಾಮಾನ್ಯ ಬಡತನದ ಕುಟುಂಬದಿಂದ ಬಂದು ತನ್ನ ಅಪರಿಮಿತ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಎರಡು ಬಾರಿ ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದರು.
ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಜನಾನುರಾಗಿಯಾಗಿದ್ದರು. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ (2023) ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಪದ್ಮನಾಭರಿಗೆ ಲಭಿಸಿತ್ತು. ಪದ್ಮನಾಭರ ಮಗ ಮೋಹನ್ ಅವರು ಸರಕಾರಿ ವಾಹನ ಚಾಲಕರು. ಮೋಹನ್ ಸ್ಪೀಕರ್ ಯು.ಟಿ.ಖಾದರ್ ಸಚಿವರಾಗಿದ್ದಾಗಲೂ ಅವರಿಗೆ ಚಾಲಕರಾಗಿದ್ದರು. ಈಗ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕಾರು ಚಾಲಕರಾಗಿದ್ದಾರೆ. ಮಗ ಜಿಲ್ಲಾಧಿಕಾರಿಯ ಕಾರು ಚಾಲಕನಾದರೂ ಅದರ ಯಾವುದೇ ಲಾಭ ಪಡೆಯದ ಪದ್ಮನಾಭರು ಸಿಂಪಲ್ ಆಗಿದ್ದರು.
ಹಿಂದಿನ ಕಮ್ಯೂನಿಸ್ಟ್ ಧುರೀಣ ಮಹಾಬಲೇಶ್ವರ ಭಟ್ಟರ ಪ್ರೇರಣೆಯಿಂದ ಕಮ್ಯೂನಿಸ್ಟ್ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿದ ಪದ್ಮನಾಭ ಅವರು ಅನೇಕ ವರ್ಷಗಳ ಕಾಲ ಸಿಪಿಐ ಪಕ್ಷದಲ್ಲಿ ಸಕ್ರಿಯವಾಗಿ ದುಡಿದವರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ನರಿಂಗಾನ ಕಂಬಳ ಸಮಿತಿಯ ಗೌರವ ಸಲಹೆಗಾರರೂ, ಅಹಿಂದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಇದ್ದಾರೆ.
ಫೆ.8ರ ಗುರುವಾರ(ನಾಳೆ) ಬೆಳಗ್ಗೆ 10 ಗಂಟೆಗೆ ಪದ್ಮನಾಭರ ನರಿಂಗಾನದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಬಳಿಕ ಅಂತ್ಯಕ್ರಿಯೆ ನಡೆಯಲಿದೆಯೆಂದು ಕುಟುಂಬಸ್ಥರು ತಿಳಿಸಿದ್ದಾರೆ.
Mangalore Congress senior leader Padmanaba Naringana close member of speaker UT Khader dies at 77
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm