ಬ್ರೇಕಿಂಗ್ ನ್ಯೂಸ್
07-02-24 06:25 pm Udupi Correspondent ಕರಾವಳಿ
ಉಡುಪಿ, ಫೆ.7: ಬೈಂದೂರಿನ ಮುದೂರು, ಜಡ್ಕಲ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ. ಅಲ್ಲದೆ, ಸ್ಥಳಕ್ಕೆ ಕಾರ್ಕಳ, ಹೆಬ್ರಿಯಲ್ಲಿದ್ದ ಏಂಟಿ ನಕ್ಸಲ್ ಫೋರ್ಸ್ ದಳದವರು ತೆರಳಿದ್ದು ಕೂಂಬಿಂಗ್ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮುದೂರು, ಜಡ್ಕಲ್ ಮತ್ತು ಬೆಳ್ಕಳ್ ಪ್ರದೇಶದ ಕಾಡು ಪರಿಸರದಲ್ಲಿ ಹಸುರು ಯೂನಿಫಾರ್ಮ್ ಹಾಕ್ಕೊಂಡಿದ್ದ ನಾಲ್ಕೈದು ಮಂದಿಯಿದ್ದ ನಕ್ಸಲರು ಕಳೆದ ಒಂದು ತಿಂಗಳಿನಿಂದ ಆಗಿಂದಾಗ್ಗೆ ಜನರಿಗೆ ಕಾಣ ಸಿಕ್ಕಿದ್ದಾರೆ. ಈ ಬಗ್ಗೆ ಅಲ್ಲಿನ ಜನರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮಾಹಿತಿ ಕಲೆಹಾಕಿದ್ದಾರೆ. ಕೆಲವರು ಶಸ್ತ್ರ ಹಿಡಿದುಕೊಂಡಿದ್ದವರನ್ನು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅದು ನಕ್ಸಲರದ್ದೇ ತಂಡ ಆಗಿರಬಹುದು ಎನ್ನುವ ಶಂಕೆ ಮೂಡಿದೆ.
ಆದರೆ ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿರಲಿಲ್ಲ. ಕೇರಳದ ವಯನಾಡು, ಕಣ್ಣೂರು ಭಾಗದ ಕಾಡುಗಳಲ್ಲಿ ನಕ್ಸಲರಿದ್ದರೂ ಇಲ್ಲಿ ಎಎನ್ಎಫ್ ಠಿಕಾಣಿ ಹೂಡಿದ್ದರಿಂದ ಮತ್ತೆ ಪ್ರತ್ಯಕ್ಷ ಆಗಿರಲಿಲ್ಲ. ಕಳೆದ ಎರಡು ತಿಂಗಳಲ್ಲಿ ಕೇರಳ ಭಾಗದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದ್ದರಿಂದ ಆ ಕಡೆಯಿಂದ ಕರ್ನಾಟಕಕ್ಕೆ ನಕ್ಸಲರು ಬಂದಿರಬಹುದು ಎನ್ನುವ ಗುಮಾನಿಯಿದೆ. ಹಾಗೆ ಬಂದಿದ್ದೇ ಆದಲ್ಲಿ ಕೇರಳದಿಂದ ಕೊಡಗಿನ ಮೂಲಕವೇ ಕರ್ನಾಟಕಕ್ಕೆ ಬರಬೇಕಿದೆ. ಇಂಥ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲವಾದರೂ, ಕೊಡಗು, ದಕ್ಷಿಣ ಕನ್ನಡದ ಪಶ್ಚಿಮ ಘಟ್ಟದ ಕಾಡುಗಳಿಂದಲೇ ಉಡುಪಿ ಸೇರಿರುವ ಸಾಧ್ಯತೆಯಿದೆ. ಅಲ್ಲದೆ, ನಕ್ಸಲರ ತಂಡವನ್ನು ಹಳೆ ನಕ್ಸಲ್ ವಿಕ್ರಂ ಗೌಡ ಅಥವಾ ರಾಯಚೂರು ಮೂಲದ ರಾಜಣ್ಣ ಮುನ್ನಡೆಸುತ್ತಿರುವ ಸಾಧ್ಯತೆ ಬಗ್ಗೆ ಹೇಳಲಾಗುತ್ತಿದೆ.
ಸದ್ಯಕ್ಕೆ ಕಾರ್ಕಳ, ಹೆಬ್ರಿ ಮತ್ತು ಅಮಾಸೆಬೈಲು ಪರಿಸರದಲ್ಲಿ ಕ್ಯಾಂಪ್ ಹಾಕಿದ್ದ ಎಎನ್ಎಫ್ ಪಡೆ ಅಲರ್ಟ್ ಆಗಿದ್ದು, ಕುಂದಾಪುರ, ಬೈಂದೂರಿನತ್ತ ತೆರಳಿದೆ. ಕಾಡು ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಗೆ ಮುಂದಾಗಿದೆ ಎನ್ನುವ ಮಾಹಿತಿ ಇದೆ. ಆದರೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿಲ್ಲ.
The Anti-Naxal Force (ANF) has been put on high alert after movement of Naxals was reported in parts of Chikkamagalur and Udupi. It is suspected that the Naxals, led by Vikram Gowda, are preparing to organise a ‘Martyr’s Day’ to honour Naxal leader Saket Rajan who was killed in an early morning encounter on February 6, 2005 near Menasinahadya in Koppa taluk.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm