ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm