ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm