ಬ್ರೇಕಿಂಗ್ ನ್ಯೂಸ್
09-02-24 05:15 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮುಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಒಂದು ಹುದ್ದೆಗೆ 20 ರಿಂದ 30 ಲಕ್ಷದ ವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇದರಿಂದ ಮಂಗಳೂರು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಟೀಕಿಸಿದ್ದಾರೆ.
ಕೊಚಿಮುಲ್ ಅಕ್ರಮ ನೇಮಕಾತಿಗೆ ಸಂಬಂಧಿಸಿ ಪರೀಕ್ಷೆ ಹಾಗೂ ಮೌಲ್ಯಮಾಪನವನ್ನು ನಡೆಸಿದ್ದ ಮಂಗಳೂರು ವಿಶ್ವವಿದ್ಯಾಲಯ ಈ ಅಕ್ರಮದಲ್ಲಿ ಭಾಗಿಯಾದ ಖಚಿತ ಮಾಹಿತಿ ಮೇರೆಗೆ ವಿವಿಯ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿಗೆ ಇ.ಡಿ ದಾಳಿ ನಡೆಸಿ, ನೇಮಕಾತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಕೆಲವು ವರ್ಷಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಬಗ್ಗೆ ರಾಜ್ಯ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಅತ್ಯುತ್ತಮ ಅಭಿಪ್ರಾಯವಿತ್ತು. ವಿದೇಶಗಳಿಂದಲೂ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದರು. ಆನಂತರದ ದಿನಗಳಲ್ಲಿ ಇಲ್ಲಿನ ಆಯಕಟ್ಟಿನ ಹುದ್ದೆಗೇರಿದ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ವಿಶ್ವವಿದ್ಯಾಲಯದ ಘನತೆಗೆ ಮಸಿ ಬಳಿದಿದ್ದಾರೆ. ಹೀಗಾಗಿ ವಿವಿ ತನ್ನ "ಎ ಗ್ರೇಡ್" ಮಾನ್ಯತೆಯಿಂದ "ಬಿ ಗ್ರೇಡ್" ಗೆ ಇಳಿದಿದ್ದು ಇಂತಹ ಅಕ್ರಮಗಳಿಂದ ವಿವಿಯ ಘನತೆಗೆ ಇನ್ನಷ್ಟು ಕುತ್ತುಂಟಾಗುತ್ತಿದೆ.
ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರೂ ಈ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯಾಗಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕೆಂದು ಶಾಸಕರು ಒತ್ತಾಯಿಸಿದರು.
ಹಲವು ಸಮಯಗಳಿಂದ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡದೇ ಇದ್ದು, ಫಲಿತಾಂಶ ಅದಲು ಬದಲಾಗಿದ್ದು, ವರ್ಷಗಟ್ಟಲೆ ಅಂಕಪಟ್ಟಿಯನ್ನು ವಿತರಿಸದೇ ಪ್ರತಿನಿತ್ಯ ವಿದ್ಯಾರ್ಥಿಗಳು ವಿ.ವಿ.ಗೆ ಅಲೆಯುತ್ತಿರುವುದು, ವಿವಿಯ ತಾತ್ಕಾಲಿಕ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೇ ಇರುವುದು ಸೇರಿದಂತೆ ಹಲವಾರು ಪ್ರಕರಣಗಳು ನಡೆಯುತ್ತಿದ್ದರೂ ಎಚ್ಚೆತ್ತುಕೊಳ್ಳದ ವಿವಿ ವಿರುದ್ಧ ಸಹಜವಾಗಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಂತಹ ವಿದ್ಯಾರ್ಥಿ ಸಂಘಟನೆಗಳು ನ್ಯಾಯಕ್ಕಾಗಿ ಬೀದಿಗಿಳಿದಿವೆ ಎಂದು ಹೇಳಿದರು.
Kochimul scam, Mangalore university, MLA Vedavyas Kamath demands clear probe. A former syndicate member of Mangalore University S.R. Harish Acharya has questioned the university conducting written tests to recruit staff for Kolar-Chickballapur Milk Producers Union Limited (KOCHIMUL) and other cooperative institutions without framing any regulations for conducting the tests. The recruitment to KOCHIML is now being inquired by the Enforcement Directorate.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm