ಬ್ರೇಕಿಂಗ್ ನ್ಯೂಸ್
09-02-24 05:25 pm Mangaluru Correspondent ಕರಾವಳಿ
ಮಂಗಳೂರು, ಫೆ.9: ಸ್ಕೂಟರ್ ಚಲಾಯಿಸುತ್ತಿದ್ದಾಗ ನಾಯಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಂಬವೊಂದಕ್ಕೆ ಡಿಕ್ಕಿಯಾದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮರೋಳಿ ಬಳಿ ನಡೆದಿದೆ.
ಕುಲಶೇಖರ ನಿವಾಸಿ ಸ್ಟಾನ್ಲೀ – ಸುನೀತಾ ಡಿಸೋಜ ದಂಪತಿಯ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಟೆರ್ರೆನ್ಸ್ ಡಿಸೋಜ(21) ಮೃತ ಯುವಕ. ಗುರುವಾರ ರಾತ್ರಿ 10 ಗಂಟೆ ವೇಳೆಗೆ ಯುವಕ ಕುಲಶೇಖರ್ ಕೋರ್ಡೆಲ್ ಚರ್ಚ್ ನಲ್ಲಿ ಹೆತ್ತವರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಬಳಿಕ ಪಡೀಲ್ ಪೆಟ್ರೋಲ್ ಪಂಪ್ ಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದ. ಈ ವೇಳೆ, ಬಿಕರ್ನಕಟ್ಟೆಯ ಫ್ಲೈಓವರ್ ಬಳಿಯಿಂದ ಸರ್ವಿಸ್ ರಸ್ತೆಯಲ್ಲಿ ಹೋಗುವಾಗಲೇ ನಾಯಿ ಮರಿಯೊಂದು ಹಠಾತ್ ರಸ್ತೆಗೆ ಅಡ್ಡ ಬಂದಿದ್ದು ಅದನ್ನು ತಪ್ಪಿಸಲು ಯತ್ನಿಸಿದ್ದಾನೆ. ವೇಗವಾಗಿದ್ದ ಸ್ಕೂಟರ್ ನೇರವಾಗಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೆಲ್ಮೆಟ್ ಹಾಕಿಲ್ಲದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.

ಕೂಡಲೇ ಸ್ಥಳೀಯರು ಹುಡುಗನನ್ನು ಎಜೆ ಆಸ್ಪತ್ರೆಗೆ ಒಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನುರಿತ ವೈದ್ಯರು ಲಭ್ಯರಿಲ್ಲ ಎಂದು ಬೇರೆ ಕಡೆಗೆ ಒಯ್ಯಲು ತಿಳಿಸಿದ್ದಾರೆ. ಬಳಿಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ತಡರಾತ್ರಿ 1.30 ಗಂಟೆ ವೇಳೆಗೆ ಯುವಕ ಮೃತಪಟ್ಟಿದ್ದಾನೆ.
ಟೆರ್ರೆನ್ಸ್ ಡಿಸೋಜ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇತರೇ ಚಟುವಟಿಕೆಗಳಲ್ಲಿಯೂ ಸಕ್ರಿಯನಾಗಿದ್ದ. ನಿನ್ನೆ ರಾತ್ರಿ ಕೋರ್ಡೆಲ್ ಚರ್ಚ್ ನಲ್ಲಿ ಕಾರ್ಯಕ್ರಮ ನಡೆದಿದ್ದು ಅದರಲ್ಲಿ ತಂದೆ, ತಾಯಿಯೂ ಪಾಲ್ಗೊಂಡಿದ್ದರು. ಅಪಘಾತದಲ್ಲಿ ಟೆರ್ರೆನ್ಸ್ ಸಾವಿಗೀಡಾಗಿರುವುದು ಸ್ನೇಹಿತ ವಲಯದಲ್ಲಿ ಶಾಕ್ ಮೂಡಿಸಿದೆ. ಬಿಕರ್ನಕಟ್ಟೆಯಲ್ಲಿ ರಸ್ತೆ ಬದಿ ನಾಯಿಗಳಿಗೆ ಊಟ ಹಾಕುವುದರಿಂದ ಬೀದಿ ನಾಯಿಗಳ ಉಪಟಳ ಹೆಚ್ಚಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
Terrence D'Souza, a Mangalore St Josephs college Engineer student, was killed when his two-wheeler slammed into an iron pole after a dog unexpectedly appeared in the center of the road. The victim, identified as Terrence D'Souza (21), son of Stanley and Sunitha D'Souza from Kulshekar,
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm