ಬ್ರೇಕಿಂಗ್ ನ್ಯೂಸ್
11-02-24 02:06 pm Mangaluru Correspondent ಕರಾವಳಿ
ಮಂಗಳೂರು, ಫೆ.11: ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂಗಳ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ಧ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ. ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.


ನಗರದ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ಧ ವಿದ್ಯಾರ್ಥಿಗಳ ಮುಂದೆ ಆಡಿದ್ದಾರೆ ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು ಖಂಡಿಸಿದ್ದಾರೆ. ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ, ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲೆ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ. ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯುವ ಕೃತ್ಯ ನಡೆದಿತ್ತು. ಇದೀಗ ರಾಮನ ಕುರಿತಂತೆ ನಿಂದನೆ ಮಾಡಿರುವುದು ಸಹಿಸಲು ಅಸಾಧ್ಯ. ಇದರ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರ ವರೆಗೆ ಡೋಂಗಿ ಜಾತ್ಯಾತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಈಗ ರಾಮನ ಅವಹೇಳನದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಮೌನ ವಹಿಸಿದ್ದು ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.
Mangalore jeppu St Gerosa English school controversy, MLA Bharath Shetty demands suspension of Teacher. Mangalore North MLA Dr. Bharat Shetty has warned that if the management board does not take action against the concerned school teacher, fierce struggle is inevitable. Hindu outfits and parents gherao school after Catholic teacher talks wrong about Hindu God Ram.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm