ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm