ಬ್ರೇಕಿಂಗ್ ನ್ಯೂಸ್
13-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.13: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಹಿಂದು ಸಂಘಟನೆಗಳು ಮತ್ತು ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿದ್ದು ಭಾರೀ ಸುದ್ದಿಯಾಗುತ್ತಲೇ ಸದ್ರಿ ಶಾಲೆಗೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದಾರೆ.
ಮಾಜಿ ಸಚಿವರಾದ ಬಿ.ರಮಾನಾಥ ರೈ ಹಾಗೂ ವಿನಯ ಕುಮಾರ್ ಸೊರಕೆ ನೇತೃತ್ವದ ಜಿಲ್ಲಾ ಕಾಂಗ್ರೆಸ್ ನಿಯೋಗ, ಜೆರೋಸಾ ಶಿಕ್ಷಣ ಸಂಸ್ಥೆಗೆ ತೆರಳಿ ಆಡಳಿತ ಮಂಡಳಿ ಜೊತೆಗೆ ಮಾತುಕತೆ ನಡೆಸಿದೆ.
ಭೇಟಿ ಬಳಿಕ ಮಾಜಿ ಸಚಿವ ರಮಾನಾಥ ರೈ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಜೆರೋಸಾ ವಿದ್ಯಾಸಂಸ್ಥೆಯ ಘಟನೆ ಬಗ್ಗೆ ದೊಡ್ಡ ಪ್ರಚಾರ ಆಗಿದೆ. ಈ ವಿಚಾರದಲ್ಲಿ ಶಿಕ್ಷಣ ಇಲಾಖೆ ಸ್ವಲ್ಪ ತಪ್ಪಾಗಿರುವಂತೆ ಕಾಣುತ್ತಿದೆ. ಆದರೆ, ಇದರ ಸತ್ಯಾಸತ್ಯತೆ ವಿಮರ್ಶೆಯನ್ನು ನಾವು ಮಾಡಬೇಕಿದೆ. ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಉಳಿಯಬೇಕು ಅನ್ನೋದು ನಮ್ಮ ಆಶಯ. ಕೆಲವರು ಪ್ರಚೋದನೆ ಮಾಡಬಹುದು, ಆದರೆ ನಾವು ಆ ಕೂಟದಲ್ಲಿ ಇಲ್ಲ. ಇವತ್ತು ಸಂಸ್ಥೆಯ ಮುಖ್ಯಸ್ಥರ ಭೇಟಿಯಾಗಿ ಮಾತುಕತೆ ಮಾಡಿದ್ದೇವೆ.






ಸರ್ಕಾರ ಇದರ ಬಗ್ಗೆ ಒಂದು ಸತ್ಯಶೋಧನ ಸಮಿತಿ ಮಾಡಬೇಕು. ಇದು ಘರ್ಷಣೆಗೆ ಕಾರಣ ಆಗಬಾರದು, ಅಹಿತಕರ ಘಟನೆ ಆಗಬಾರದು. ಕ್ರೈಸ್ತ ಆಡಳಿತ ಮಂಡಳಿ ಇದೆ, ಆದರೆ ಸಮಸ್ಯೆ ಸರಿಪಡಿಸದ ಶಿಕ್ಷಣ ಇಲಾಖೆ ಇದಕ್ಕೆಲ್ಲ ಜವಾಬ್ದಾರಿಯಾಗುತ್ತೆ. ಪರಿಶುದ್ಧವಾದ ಮಕ್ಕಳ ನಿಷ್ಕಲ್ಮಷ ಮನಸ್ಸನ್ನ ಪ್ರಚೋದನೆಗೆ ಬಳಸಬಾರದು. ಯಾರು ಬೇಕಾದರೂ ಮಾತನಾಡಲಿ, ಆದರೆ ಶಾಲೆಯ ಮಕ್ಕಳ ಬಳಸಿಕೊಂಡಿದ್ದನ್ನು ಒಪ್ಪಲ್ಲ. ಸರ್ಕಾರದ ಕಡೆಯಿಂದ ತನಿಖೆ ಆಗಿ ಸೂಕ್ತ ಕ್ರಮ ಆಗಬೇಕು. ಸದ್ಯ ತನಿಖೆ ಪ್ರಾಥಮಿಕ ಹಂತದಲ್ಲಿದೆ, ಯಾವುದೇ ಗಲಾಟೆ ಆಗಬಾರದು ಅಷ್ಟೇ. ಸರ್ಕಾರದ ಮಟ್ಟದಲ್ಲಿ ಶಿಕ್ಷಣ ಇಲಾಖೆಯಿಂದ ಸ್ವತಂತ್ರ ತನಿಖೆ ಆಗಬೇಕು. ಅಧಿಕಾರಿಗಳು ಪ್ರಕರಣ ಉಲ್ಪಣವಾದ ಬಳಿಕ ಒತ್ತಡದ ಮೇಲೆ ಬಂದಿದ್ದಾರೆ. ಶಿಕ್ಷಣ ಇಲಾಖೆ ಯಾವುದೇ ಪ್ರಚೋದನೆಗೆ ಒಳಗಾಗದೇ ತನಿಖೆ ನಡೆಸಲಿ. ಮಕ್ಕಳನ್ನ ರಾಜಕೀಯಕ್ಕೆ ಬಳಸಬಾರದು, ಅದರ ಬಗ್ಗೆಯೂ ತನಿಖೆ ಆಗಲಿ. ಮಕ್ಕಳನ್ನು ದುರುಪಯೋಗ ಪಡಿಸಿಕೊಂಡಿದ್ದರೆ ಅದರ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆ ತನಿಖೆ ಮಾಡಲಿ ಎಂದಿದ್ದಾರೆ.
ವಿನಯ ಸೊರಕೆ ಪ್ರತಿಕ್ರಿಯಿಸಿ, ಪ್ರಕರಣದ ಸತ್ಯಾಸತ್ಯತೆ ತಿಳಿಯಲು ನಾವು ಭೇಟಿಯಾಗಿದ್ದೇವೆ. ಸಂಬಂಧ ಪಟ್ಟ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಒತ್ತಾಯ ಮಾಡ್ತೇವೆ. ಎಲ್ಲವೂ ತನಿಖೆ ಆಗಲಿ, ಸರ್ಕಾರದಿಂದ ಸ್ವತಂತ್ರ ತನಿಖೆ ನಡೆಯಲಿ. ಶಾಲಾ ಆಡಳಿತ ಮಂಡಳಿ ಶಿಕ್ಷಣ ಇಲಾಖೆಗೆ ತನಿಖೆ ನಡೆಸಲು ಬಿಟ್ಟಿದ್ದಾರೆ. ಆದರೆ ಇದರ ಮಧ್ಯೆ ಇದೆಲ್ಲಾ ಇಲ್ಲಿ ಆಗಿಹೋಗಿದೆ ಎಂದು ಹಿಂದು ಸಂಘಟನೆಗಳ ಹೆಸರೆತ್ತದೆ ಹೇಳಿಕೆ ನೀಡಿದ್ದಾರೆ.
Mangalore Congress leader Ramanth Rai demands for clean probe in jeppu Gerosa School over alleged derogatory remarks. Protests over the alleged derogatory remarks against Hinduism and Lord Sri Rama by a teacher in the classroom of St. Gerosa English Medium Higher Primary School here ended with the management keeping the teacher under suspension pending inquiry by the Education Department.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm