ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.




ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm