ಬ್ರೇಕಿಂಗ್ ನ್ಯೂಸ್
14-02-24 11:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮಲೆನಾಡು ಗಿಡ್ಡ ತಳಿ ಗೋವುಗಳ ಅಭಿವೃದ್ಧಿ ಜೊತೆಗೆ ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಕಳೆದ ಜ.14ರಿಂದ ನಡೆದುಬಂದ ಒಂದು ತಿಂಗಳ ಗೋಸೇವಾ ಮಾಸಾಚರಣೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.13ರ ಮಂಗಳವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.
ಮಕರ ಸಂಕ್ರಮಣದಂದು ಆರಂಭಗೊಂಡಿದ್ದ ಗೋಸೇವಾ ಮಾಸಾಚರಣೆ ಕುಂಭ ಮಾಸದಂದು ಸಮಾಪನಗೊಂಡಿದೆ. ಮಕರ ಮಾಸದಲ್ಲಿ ಗೋದರ್ಶನ ಮಾಡಿದವರ ಜನ್ಮ ಪಾವನವಾಗುತ್ತದೆ ಎಂದು ನಂಬಿಕೆಯಿದೆ. ಹೀಗಾಗಿ ಭಕ್ತರು ನಿತ್ಯವೂ ಭಜನೆ, ಶ್ರೀಮದ್ ರಾಮಾಯಣ, ಭಗವದ್ಗೀತೆ ಪಾರಾಯಣದ ಸವಿಯನ್ನು ಅನುಭವಿಸಿದರು.




ಗೋಸೇವಾ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆ ನಿತ್ಯವೂ ನಡೆಯಿತು. ಪ್ರತಿನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ಸಂದ್ಯಾ ಭಜನೆ ನಡೆಯಿತು. ಗೋಸೇವಾ ಮಾಸಾಚರಣೆಯ ಕೊನೆಯ ದಿನವಾದ ಸೋಮವಾರ ಭಜನಾ ಮಂಗಳೋತ್ಸವ ಹಾಗೂ ದೀಪೋತ್ಸವ ಮೂಲಕ ಗೋಸೇವಾ ಮಾಸಾಚರಣೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಗೋಶಾಲಾ ಸಂಚಾಲಕ ಟಿ.ಜಿ ರಾಜಾರಾಮ್ ಭಟ್ ಮಾತನಾಡಿ, ಗೋಸೇವೆಯ ಮಾಸಾಚರಣೆಯಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಆ ಗೋಮಾತೆಯ ಆಶೀರ್ವಾದವಿರಲಿ ಹಾಗೂ ಗೋಸೇವೆ ನಿತ್ಯ ನಿರಂತರವಾಗಿ ನಡೆಯಲಿದ್ದು, ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಹಣದಿಂದ ಭೋಗ ಮತ್ತು ದಾನ ಎರಡನ್ನು ಹೊರತು ಬೇರೆ ಏನೂ ಮಾಡಲು ಸಾಧ್ಯವಿಲ್ಲ. ರಕ್ತ ಮತ್ತು ಹಣ ಒಂದೇ ಕಡೆ ಉಳಿಯಬಾರದು, ಹರಿಯುತ್ತಿರಬೇಕು. ಅದಕ್ಕಾಗಿ ದಾನ ಮಾಡಿ ಎಂದರು.
ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಉಪಸ್ಥಿತರಿದ್ದರು.
The month-long 'Goseva Maasa' celebrations, which began on January 14 at Amritadhara Goshala in Punyakoti town of Kairangala, with the development of Malnad short breed cows under the guidance of Sri Raghaveshwara Bharathi Swamiji, concluded with deepotsava on Tuesday, Feb. 13, with various religious and cultural programmes.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm