ಬ್ರೇಕಿಂಗ್ ನ್ಯೂಸ್
16-02-24 11:03 pm Mangalore Correspondent ಕರಾವಳಿ
ಮಂಗಳೂರು, ಫೆ.16: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಗ್ಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಬಸ್, ಲಾರಿ ಇನ್ನಿತರ ಘನ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ಉಡುಪಿ, ಮಂಗಳೂರು ಕಡೆಯಿಂದ ಬಿಸಿ ರೋಡ್ ಕಡೆಗೆ ತೆರಳುವ ಘನ ವಾಹನಗಳು ನಂತೂರು- ಪಂಪ್ವೆಲ್- ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ಮೂಲಕ ಸಂಚರಿಸುವುದು. ಅದೇ ರೀತಿ ಬೆಂಗಳೂರು- ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಗಮಿಸುವ ಘನ ವಾಹನಗಳು ಮೆಲ್ಕಾರ್- ಮುಡಿಪು- ತೊಕ್ಕೊಟ್ಟು- ಪಂಪ್ವೆಲ್ ಮೂಲಕ ತೆರಳುವುದು, ಈ ತಾತ್ಕಾಲಿಕ ಸಂಚಾರ ಬದಲಾವಣೆ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.

ವಾಹನ ಪಾರ್ಕಿಂಗ್ ವಿವರ
ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.
ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.
The movement of heavy vehicles between BC Road and Padil will be disrupted from morning to evening on February 17 as the Congress is holding a state-level convention at Adyar on NH-73. Hence, alternative arrangements have been made for the movement of buses, lorries and other heavy vehicles.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm