ಬ್ರೇಕಿಂಗ್ ನ್ಯೂಸ್
17-02-24 05:41 pm Mangalore Correspondent ಕರಾವಳಿ
ಮಂಗಳೂರು, ಫೆ.17: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಗದ್ದೆಯಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆ. ಅದನ್ನು ಮತ್ತೆ ನೆನಪಿಸುತ್ತೇನೆ. ಚುನಾವಣೆಯಲ್ಲಿ ಏನು ಹೇಳಿದ್ದೆವೋ ಐದು ಗ್ಯಾರಂಟಿಯನ್ನೂ ಕೊಟ್ಟಿದ್ದೇವೆ. ಇದನ್ನೇ ಮುಂದಿಟ್ಟು ಕಾರ್ಯಕರ್ತರು ಮತ ಕೇಳಬೇಕು. ಎರಡು ಸೀಟು ಇರೋದು ಅಂತ ಅಳುಕು ಬೇಡ. ಸೋತಲ್ಲೇ ಗೆಲ್ಲಬೇಕಾಗಿದೆ, ರಾಜ್ಯದಲ್ಲಿ ನಾವು 20 ಸೀಟು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಡ್ಯಾರಿನಲ್ಲಿ ನಡೆದ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಐದು ಬೆರಳು ಸೇರಿ ಮುಷ್ಟಿ ಗಟ್ಟಿಯಾಯ್ತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯ್ತು. ತೆನೆಹೊತ್ತ ಮಹಿಳೆ ಕಾಂಗ್ರೆಸ್ ಗ್ಯಾರಂಟಿಗೆ ಹೆದರಿ ಬಿಜೆಪಿ ಸೇರಿದ್ದಾಳೆ ಎಂದು ಅಣಕಿಸಿದ ಡಿಕೆಶಿ, ನನ್ನನ್ನು ಬಂಡೆಯಂತೆ ಕರೆಯುತ್ತೀರಿ, ಅದು ಚಪ್ಪಡಿಯಾಗಲಿ, ವಿಧಾನಸೌಧಕ್ಕೆ ಚಪ್ಪಡಿಯಾಗಲಿ, ನೀವೆಲ್ಲ ಅದನ್ನು ತುಳಿದು ವಿಧಾನಸೌಧಕ್ಕೆ ಬರುತ್ತೀರಿ ಎಂದಿದ್ದೆ. 136 ಶಾಸಕರನ್ನು ಗೆಲ್ಲಿಸಿ ಕೊಟ್ಟಿದ್ದೀರಿ. ನನಗೆ ಭರವಸೆ ಇದೆ, ರಾಜ್ಯದಲ್ಲಿ 20 ಸೀಟನ್ನು ಗೆಲ್ಲುತ್ತೇವೆ ಎಂದರು.

ಕಾರ್ಯಕರ್ತರು ಆತ್ಮವಿಶ್ವಾಸ ಕಳಕೊಳ್ಳಬೇಡಿ. ಜಿಲ್ಲೆಯಲ್ಲಿ ಎರಡು ಸೀಟು ಇರೋದು ಅಂತ ಅಳುಕು ಬೇಡ. 2011ರಲ್ಲಿ ಸದಾನಂದ ಗೌಡರು ಉಡುಪಿ ಎಂಪಿ ಆಗಿದ್ದಾಗ ಉಪ ಚುನಾವಣೆಯಲ್ಲಿ ನಾವು ಸಂಸದ್ ಸ್ಥಾನವನ್ನು ಗೆದ್ದು ಸಂಸತ್ತಿಗೆ ಕಳಿಸಿದ ಉದಾಹರಣೆ ಇದೆ. ಹಿಂದೆ ದೇವೇಗೌಡರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದರು. ಇವತ್ತು ತನ್ನ ಮಗನನ್ನೇ ಬಿಜೆಪಿಗೆ ಕಳಿಸಿದ್ದಾರೆ. ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ, ಏನು ಕೂಡ ಆಗಬಹುದು. ಅದರ ಬಗ್ಗೆ ಟೀಕೆ ಮಾಡಲ್ಲ. ಕಾಂಗ್ರೆಸ್ ಬಗ್ಗೆ ಭಯಗೊಂಡಿದ್ದರಿಂದ ಇವರು ಒಟ್ಟು ಸೇರಿ ಚುನಾವಣೆಗೆ ಹೊರಟಿದ್ದಾರೆ. ಆದರೆ ಜನರು ನಮ್ಮ ಸಾಧನೆ ನೋಡಿ ಮತ ಕೊಡಲಿದ್ದಾರೆ.
ಪ್ರಧಾನಿ ಮೋದಿ 375 ಸ್ಥಾನ ಗೆಲ್ತೀವಿ ಎಂದಿದ್ದಾರೆ, ಆದರೆ ಅದು ಸಾಧ್ಯವಿಲ್ಲ. ರಾಹುಲ್ ಗಾಂಧಿ ದೇಶಾದ್ಯಂತ ಸುತ್ತುತ್ತಿದ್ದಾರೆ ಎಂದು ಹೇಳಿದ ಅವರು, ನೀವೆಲ್ಲ ಸೇರಿ ಅತಿ ಹೆಚ್ಚು ಮತಗಳನ್ನು ತಂದು ಕೊಡಬೇಕಾಗಿದೆ. ನಾವು ಸೋಲುವುದಿಲ್ಲ ಎಂಬ ಭರವಸೆ ನಮ್ಮಲ್ಲಿರಬೇಕು. ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಐದು ಗ್ಯಾರಂಟಿಗಳನ್ನು ನೀಡಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾತ್ರ. ಇದರ ಜೊತೆಗೆ ಐತಿಹಾಸಿಕ ಬಜೆಟ್ ಕೊಟ್ಟಿದ್ದೇವೆ. ಆದರೆ ಬಿಜೆಪಿಯವರು ಬಜೆಟ್ ಅಧಿವೇಶನದಲ್ಲಿ ಪ್ರತಿಭಟನೆ ಮಾಡಿ ಅವಹೇಳನ ಮಾಡಿದ್ದಾರೆ. 30 ವರ್ಷಗಳ ನನ್ನ ರಾಜಕಾರಣದಲ್ಲಿ ಬಜೆಟನ್ನು ವಿರೋಧ ಪಕ್ಷ ವಿರೋಧಿಸಿ ಸಭಾತ್ಯಾಗ ಮಾಡಿದ್ದು ನೋಡಿಲ್ಲ. ಬಿಜೆಪಿ- ಜೆಡಿಎಸ್ ಏನೇ ತಿಪ್ಪರಲಾಗ ಹಾಕಿದರೂ ಏನೂ ಆಗಲ್ಲ. ಮುಂದಿನ ಸಲವೂ ಕಾಂಗ್ರೆಸ್ಸೇ ಗೆಲ್ಲಲಿದೆ ಎಂಬುದನ್ನು ಬರೆದಿಟ್ಟುಕೊಳ್ಳಿ ಎಂದು ಡಿಕೆ ಶಿವಕುಮಾರ್ ಹೇಳಿದರು.
20 MP seats is for sure from Karnataka says DK Shivakumar in Mangalore addressing the congress rally held at Adyar. Jds has joined bjp with the afraid of Congress.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm