ಬ್ರೇಕಿಂಗ್ ನ್ಯೂಸ್
17-02-24 07:50 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ ಮೊದಲೇ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ. ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ. ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.




ಬಜೆಟ್ ನಲ್ಲಿ ಮೀನುಗಾರರಿಗೆ ಬಹಳಷ್ಟು ಕೊಟ್ಟಿದ್ದೇವೆ. ಮೊದಲ ಬಾರಿ ಬೋಟ್ ಅಂಬ್ಯುಲೆನ್ಸ್ ನೀಡಿದ್ದೇವೆ. ಮೀನುಗಾರರಿಗೆ ನೀಡುತ್ತಿದ್ದ ಅನುದಾನವನ್ನು ಮೂರೂವರೆ ಸಾವಿರಕ್ಕೆ ಏರಿಸಿದ್ದೇವೆ. ಮೀನುಗಾರರಿಗೆ ಬಜೆಟ್ ನಲ್ಲಿ ಬಂಪರ್ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನ ವಿಚಾರದಲ್ಲಿ ಕೇಳಿದ್ದಕ್ಕೆ, ಬಿಜೆಪಿ ಈ ಬಗ್ಗೆ ಹೋರಾಟ ಮಾಡಲಿ, ಯಾರ ತಕರಾರು ಇರೋದಿಲ್ಲ. ಘಟನೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ತನಿಖೆಯಲ್ಲಿ ಏನು ರಿಪೋರ್ಟ್ ಬರುತ್ತೆ ನೋಡೋಣ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಕಮಲನಾಥ್ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ, ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ. ಬಿಜೆಪಿ ಬೆದರಿಸಿ ಅಪರೇಷನ್ ಕಮಲ ಮಾಡುತ್ತಾರೆ. ನಮ್ಮ MLA ಗಳಿಗೆ 50 ಕೋಟಿ ನೀಡುತ್ತೇವೆ ಅಂದಿದ್ರು. ಆಪರೇಷನ್ ಕಮಲ ಯಡಿಯೂರಪ್ಪ ಕಾಲದಲ್ಲಿ ಶುರುವಾಗಿದ್ದು. ಬಿಜೆಪಿ ಸೇರದೇ ಹೋದ್ರೆ ಇಡಿ ಮೂಲಕ ಹೆದರಿಸುತ್ತಾರೆ ಎಂದರು.
Mangalore BJP Protest, No gherao by BJP to my car says CM Siddaramaiah, may be it was someone elses car. Bjp workers held protest by showing black flag near bondel in Mangalore while cm and kharge was on thier way to adyar.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm