ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm