ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm