ಬ್ರೇಕಿಂಗ್ ನ್ಯೂಸ್
19-02-24 09:04 pm Mangalore Correspondent ಕರಾವಳಿ
ವಿಜಯಪುರ, ಫೆ.19: ರಾಜ್ಯದಲ್ಲಿ 3600 ಲಂಬಾಣಿ ತಾಂಡಾಗಳಿದ್ದು, ಇವುಗಳಲ್ಲಿ ಶೇ.50ರಷ್ಟು ಕ್ರಿಶ್ಚಿಯನ್ನರು ನುಗ್ಗಿದ್ದಾರೆ. ಅಲ್ಲಿನ ಜನರನ್ನು ಮೋಸ ಮಾಡಿ ಮತಾಂತರ ಮಾಡುತ್ತಿದ್ದಾರೆ. ಕ್ರಿಶ್ಚಿಯನ್ ಮತಾಂತರಿ ಪಾದ್ರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಮೋಸದ ಮತಾಂತರ ನಿಲ್ಲಿಸದಿದ್ದರೆ ನಮ್ಮ ವಿಶೇಷ ಫೋರ್ಸ್ ನಿಮ್ಮನ್ನು ಒದ್ದು ಓಡಿಸಲಿದೆ. ಅನಧಿಕೃತ ಚರ್ಚ್ ಗಳನ್ನು ತೆರವು ಮಾಡಲಿದೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಿಮ್ಮ ನೀಚ ಕೆಲಸವನ್ನು ಯೇಸು ಒಪ್ಪಲ್ಲ. ಮತಾಂತರ ನಿಷೇಧ ಕಾನೂನಡಿ ಈ ಕೃತ್ಯ ತಡೆಯಬೇಕು. ತಾಂಡಾಗಳ ಬಡತನ, ಅನಕ್ಷರತೆಯನ್ನೇ ಬಳಸಿಕೊಂಡು, ಆಸೆ ತೋರಿಸಿ ಮತಾಂತರ ಮಾಡುತ್ತಿದ್ದಾರೆ. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು’ ಎಂದು ಮುತಾಲಿಕ್ ಹೇಳಿದರು.
ಜನಸಂಘದ ಪ್ರಣಾಳಿಕೆಯಲ್ಲಿಯೇ ಹಿಂದುತ್ವ, ಗೋಹತ್ಯೆ, ಮತಾಂತರ ನಿಷೇಧಗಳನ್ನು ಹಾಕಿಕೊಂಡಿದೆ. ಬಿಜೆಪಿ ಅದನ್ನು ಮುಂದುವರೆಸಿದೆ. ಹಿಂದು ರಾಷ್ಟ್ರದ ಆಲೋಚನೆಯೂ ಜನಸಂಘದ ಕಲ್ಪನೆ. ಚುನಾವಣೆ ಬಂದಾಗ ಮಾತ್ರ ಅದರ ಆಲೋಚನೆ ಬರುವುದಲ್ಲ. ಪ್ರಧಾನಿ ಮೋದಿ ಅವರು ಹಿಂದುರಾಷ್ಟ್ರದ ಕಡೆ ಹೆಜ್ಜೆ ಇಡುತ್ತಿದ್ದಾರೆ. 2024ರ ನಂತರ ನೂರಕ್ಕೆ ನೂರು ಹಿಂದು ರಾಷ್ಟ್ರವಾಗುತ್ತದೆ. ಹಾಗೆಂದು ಯಾರೂ ದೇಶ ಬಿಟ್ಟು ಹೋಗಬೇಕಾಗಿಲ್ಲ, ಇಲ್ಲಿನ ಬಹುಸಂಖ್ಯಾತ ಹಿಂದುಗಳ ಸಂಸ್ಕೃತಿಯನ್ನು ಒಪ್ಪಿ ಎಲ್ಲರೂ ಬದುಕು ನಡೆಸಬಹುದು ಎಂದು ಹೇಳಿದರು.
2014ರ ಹಿಂದಿನ ಪ್ರಧಾನಿಗಳು ಒಬ್ಬರೂ ಒಂದೂ ದೇವಸ್ಥಾನಕ್ಕೆ ಹೋಗಿರಲಿಲ್ಲ. ಮದರಸಾಗಳಿಗೆ ಹೋಗುತ್ತಿದ್ದರು. ಬಾಬರ್ನನ್ನು ಹೊತ್ತು ಮೆರೆಸುತ್ತಿದ್ದರು. ಆದರೆ, 2014ರ ಬಳಿಕ ಪ್ರಧಾನಿಯಾದ ಮೋದಿಯವರು ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಕಾಂಗ್ರೆಸಿನವರು ನಾವೂ ರಾಮ ಮಂದಿರ ಮಾಡುತ್ತೇವೆ ಎನ್ನುವುದು ಬೊಗಳೆ. ಅವರು ಮಾಡೋದಿದ್ದರೆ ರಾಮನ ಮಂದಿರಕ್ಕೆ ಬಜೆಟಲ್ಲಿ ಹಣ ಇಡಬೇಕಿತ್ತು. ಅವರಿಗೆ ಕ್ರೈಸ್ತ ನಿಗಮ, ಹಜ್ ಭವನಕ್ಕೆ ನೀಡಲು ಕೋಟಿ ಕೋಟಿ ಹಣ ಇದೆ. ರಾಮನಿಗೆ ಕೊಡಲು ಹಣ ಇಲ್ಲ ಎಂದರು.
We will destroy unauthorised churches in Karnataka by bulldozer says Pramod Muthalik. Many of the lambani community have been targeted by Christian missionaries for conversion. We ourselves will destroy unauthorised churches in Karnataka if government does not take any action.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm