ಬ್ರೇಕಿಂಗ್ ನ್ಯೂಸ್
19-02-24 09:38 pm Mangalore Correspondent ಕರಾವಳಿ
ಮಂಗಳೂರು, ಫೆ.19: ಶಾಲೆಗಳ ಮೂಲಕ ಮನೆಗಳನ್ನು ಸಂಪರ್ಕಿಸಿ ಶಿಕ್ಷಕರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ರಾಮನ ಬಗ್ಗೆ ಅವಹೇಳನ ಮಾಡಿರುವ ಶಿಕ್ಷಕಿ ಮತಾಂತರದ ಉದ್ದೇಶ ಹೊಂದಿದ್ದಾರೆ. ಆಕೆಯ ವಿರುದ್ಧ ಪೊಲೀಸರು ಕೂಡಲೇ ಎಫ್ಐಆರ್ ದಾಖಲು ಮಾಡಬೇಕು ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಆರೋಪಿಸಿದ್ದಾರೆ.
ಜಿರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮ ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಗರ ಕ್ಲಾಕ್ ಟವರ್ ನಲ್ಲಿ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಕಾಂಗ್ರೆಸ್ ಸರಕಾರ ದಂಗಲ್ ಎಬ್ಬಿಸಲು ನೋಡುತ್ತಿದೆ. ಇದು ಜಾತಿ, ಧರ್ಮದ ದಂಗಲ್ ಅಲ್ಲ. ಕಾಂಗ್ರೆಸ್ ದಂಗಲ್ ಆಗಿದ್ದು, ಪೊಲೀಸರು ಸರಕಾರದ ಪರ ನಿಂತರೆ ಮುಂದೆ ಕಂಗಾಲು ಆಗಬೇಕಾಗುತ್ತದೆ. ಯಾಕಂದ್ರೆ, ಶಿಕ್ಷಕಿ ವಿರುದ್ಧ ಕ್ರಮ ಜರುಗಿಸದಿದ್ದರೆ ನಾವು ಈ ಪ್ರತಿಭಟನೆಯನ್ನು ಇಡೀ ರಾಜ್ಯಕ್ಕೆ ಹಬ್ಬಿಸುತ್ತೇವೆ ಎಂದರು.



ಹಿಂದುಗಳು ಯಾವತ್ತೂ ಇತರ ಧರ್ಮೀಯರನ್ನು ಅವಹೇಳನ ಮಾಡಲ್ಲ. ಇವರು ಆ ರೀತಿ ಮಾಡಲು ಮುಂದಾದರೆ ನಾವು ಸುಮ್ಮನೆ ಇರೋದಿಲ್ಲ. ಶಾಸಕರ ಮೇಲೆ ಎಫ್ಐಆರ್ ದಾಖಲಿಸಿರುವುದು ಮಂಗಳೂರಿನ ಮತದಾರರ ಮೇಲೆ ಕ್ರಮ ಜರುಗಿಸಿದಂತೆ. ಜನರಿಂದ ಆಯ್ಕೆಯಾದ ವ್ಯಕ್ತಿ ಪೋಷಕರ ಕರೆಗೆ ಓಗೊಟ್ಟು ಅವರ ಪರವಾಗಿ ನಿಂತಿದ್ದಕ್ಕೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹ ಮಾಡಿದರು. ಪ್ರತಿಭಟನೆಯಲ್ಲಿ ರವಿಶಂಕರ ಮಿಜಾರ್, ವಿಜಯಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ರಾಜಗೋಪಾಲ್ ರೈ ಮತ್ತಿತರರಿದ್ದರು.
ಪ್ರತಿಭಟನೆ ಕೊನೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಹೊಯ್ದಾಟ ನಡೆಯಿತು. ಕಾರ್ಯಕರ್ತರು ಧಿಕ್ಕಾರ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದರೆ, ರಸ್ತೆಗೆ ಬರದಂತೆ ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಒಂದಷ್ಟು ಹೊತ್ತು ವಾಗ್ವಾದ, ಮಾತಿನ ಚಕಮಕಿ ನಡೆಯಿತು.
Mangalore Gerosa School Controversy, BJP Holds protest demanding action against sister Prabha.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm