ಬ್ರೇಕಿಂಗ್ ನ್ಯೂಸ್
19-02-24 09:38 pm Mangalore Correspondent ಕರಾವಳಿ
ಮಂಗಳೂರು, ಫೆ.19: ಶಾಲೆಗಳ ಮೂಲಕ ಮನೆಗಳನ್ನು ಸಂಪರ್ಕಿಸಿ ಶಿಕ್ಷಕರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ರಾಮನ ಬಗ್ಗೆ ಅವಹೇಳನ ಮಾಡಿರುವ ಶಿಕ್ಷಕಿ ಮತಾಂತರದ ಉದ್ದೇಶ ಹೊಂದಿದ್ದಾರೆ. ಆಕೆಯ ವಿರುದ್ಧ ಪೊಲೀಸರು ಕೂಡಲೇ ಎಫ್ಐಆರ್ ದಾಖಲು ಮಾಡಬೇಕು ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಆರೋಪಿಸಿದ್ದಾರೆ.
ಜಿರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮ ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಗರ ಕ್ಲಾಕ್ ಟವರ್ ನಲ್ಲಿ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಕಾಂಗ್ರೆಸ್ ಸರಕಾರ ದಂಗಲ್ ಎಬ್ಬಿಸಲು ನೋಡುತ್ತಿದೆ. ಇದು ಜಾತಿ, ಧರ್ಮದ ದಂಗಲ್ ಅಲ್ಲ. ಕಾಂಗ್ರೆಸ್ ದಂಗಲ್ ಆಗಿದ್ದು, ಪೊಲೀಸರು ಸರಕಾರದ ಪರ ನಿಂತರೆ ಮುಂದೆ ಕಂಗಾಲು ಆಗಬೇಕಾಗುತ್ತದೆ. ಯಾಕಂದ್ರೆ, ಶಿಕ್ಷಕಿ ವಿರುದ್ಧ ಕ್ರಮ ಜರುಗಿಸದಿದ್ದರೆ ನಾವು ಈ ಪ್ರತಿಭಟನೆಯನ್ನು ಇಡೀ ರಾಜ್ಯಕ್ಕೆ ಹಬ್ಬಿಸುತ್ತೇವೆ ಎಂದರು.



ಹಿಂದುಗಳು ಯಾವತ್ತೂ ಇತರ ಧರ್ಮೀಯರನ್ನು ಅವಹೇಳನ ಮಾಡಲ್ಲ. ಇವರು ಆ ರೀತಿ ಮಾಡಲು ಮುಂದಾದರೆ ನಾವು ಸುಮ್ಮನೆ ಇರೋದಿಲ್ಲ. ಶಾಸಕರ ಮೇಲೆ ಎಫ್ಐಆರ್ ದಾಖಲಿಸಿರುವುದು ಮಂಗಳೂರಿನ ಮತದಾರರ ಮೇಲೆ ಕ್ರಮ ಜರುಗಿಸಿದಂತೆ. ಜನರಿಂದ ಆಯ್ಕೆಯಾದ ವ್ಯಕ್ತಿ ಪೋಷಕರ ಕರೆಗೆ ಓಗೊಟ್ಟು ಅವರ ಪರವಾಗಿ ನಿಂತಿದ್ದಕ್ಕೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹ ಮಾಡಿದರು. ಪ್ರತಿಭಟನೆಯಲ್ಲಿ ರವಿಶಂಕರ ಮಿಜಾರ್, ವಿಜಯಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ರಾಜಗೋಪಾಲ್ ರೈ ಮತ್ತಿತರರಿದ್ದರು.
ಪ್ರತಿಭಟನೆ ಕೊನೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಹೊಯ್ದಾಟ ನಡೆಯಿತು. ಕಾರ್ಯಕರ್ತರು ಧಿಕ್ಕಾರ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದರೆ, ರಸ್ತೆಗೆ ಬರದಂತೆ ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಒಂದಷ್ಟು ಹೊತ್ತು ವಾಗ್ವಾದ, ಮಾತಿನ ಚಕಮಕಿ ನಡೆಯಿತು.
Mangalore Gerosa School Controversy, BJP Holds protest demanding action against sister Prabha.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm