ಬ್ರೇಕಿಂಗ್ ನ್ಯೂಸ್
20-02-24 10:16 am Mangalore Correspondent ಕರಾವಳಿ
ಮಂಗಳೂರು, ಫೆ.20: ಸಂತ ಜೆರೊಸಾ ಶಾಲೆಯಲ್ಲಿ ಹಿಂದು ಧರ್ಮ ಅವಹೇಳನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಮಾಡಲಾಗಿದೆ. ಈ ಬಗ್ಗೆ ಪೋಷಕಿ ಮಂಗಳೂರಿನ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ಜೆರೊಸಾ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣಕ್ಕೆ ಶಿಕ್ಷಕಿಯೂ ಆಗಿರುವ ಪೋಷಕಿ ಕವಿತಾ ಅವರನ್ನು ತಾವು ಕೆಲಸ ಮಾಡುತ್ತಿದ್ದ ಶಾಲೆಯಿಂದ ಕಿತ್ತು ಹಾಕಲಾಗಿದೆ. ತೊಕ್ಕೊಟ್ಟಿನ ಹೋಲಿ ಏಂಜಲ್ ಪ್ರಾಥಮಿಕ ಶಾಲೆಯಲ್ಲಿ ಕವಿತಾ ಶಿಕ್ಷಕಿಯಾಗಿದ್ದರು. ಕವಿತಾ ಅವರು ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿದ್ದು ಮಗಳು ಸಂತ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ. ರಾಮನ ಬಗ್ಗೆ ಅವಹೇಳನಗೈದ ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಳು.
ಘಟನೆಯ ಬಳಿಕ ಫೆ.10 ರಂದು ಹಿಂದು ಸಂಘಟನೆಗಳ ಜೊತೆಗೆ ಡಿಡಿಪಿಐ ಕಚೇರಿಗೆ ಬಂದಿದ್ದ ಕವಿತಾ, ಹಿಂದು ಧರ್ಮ ಅವಹೇಳನ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದರು. ಈ ವೇಳೆ ಕವಿತಾ ಅವರು ಮಾತನಾಡಿದ್ದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾ ಅವರನ್ನು ಕ್ರೈಸ್ತ ಶಿಕ್ಷಣ ಸಂಸ್ಥೆ ಹೋಲಿ ಎಂಜಲ್ ಶಾಲೆಯ ಆಡಳಿತ ಮಂಡಳಿ ಕಿತ್ತು ಹಾಕಿದೆ. ಹೋಲಿ ಎಂಜಲ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದರು.
ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಹೋಲಿ ಎಂಜಲ್ ಶಾಲೆಯನ್ನು ನಡೆಸುತ್ತಿರುವ ಫಾದರ್ ಹೇಳಿದ್ದಾಗಿ ಕವಿತಾ ತಿಳಿಸಿದ್ದಾರೆ. ಅಲ್ಲದೆ, ಕವಿತಾ ಅವರ ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು ರಾತ್ರಿ ವೇಳೆ ವಾಟ್ಸಪ್ ನಂಬರಿಗೆ ಅಶ್ಲೀಲವಾಗಿ ಆಡಿಯೋ ಮೆಸೇಜ್ ಗಳನ್ನು ಹಾಕುತ್ತಿದ್ದಾರೆ. ಕತಾರ್ ದೇಶದಿಂದ ರಾತ್ರಿ ವೇಳೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಸೋಮವಾರ ರಾತ್ರಿ ದೂರು ನೀಡಿದ್ದಾರೆ.
Mangalore Gerosa school audio viral, teacher of Holy Angel school dismissed, teacher gets threat calls. The school dismissed teacher Kavitha for taking to media against the school as her daughter is studying at Gerosa.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm