ಬ್ರೇಕಿಂಗ್ ನ್ಯೂಸ್
20-02-24 10:16 am Mangalore Correspondent ಕರಾವಳಿ
ಮಂಗಳೂರು, ಫೆ.20: ಸಂತ ಜೆರೊಸಾ ಶಾಲೆಯಲ್ಲಿ ಹಿಂದು ಧರ್ಮ ಅವಹೇಳನದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಮಾಡಲಾಗಿದೆ. ಈ ಬಗ್ಗೆ ಪೋಷಕಿ ಮಂಗಳೂರಿನ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ಜೆರೊಸಾ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣಕ್ಕೆ ಶಿಕ್ಷಕಿಯೂ ಆಗಿರುವ ಪೋಷಕಿ ಕವಿತಾ ಅವರನ್ನು ತಾವು ಕೆಲಸ ಮಾಡುತ್ತಿದ್ದ ಶಾಲೆಯಿಂದ ಕಿತ್ತು ಹಾಕಲಾಗಿದೆ. ತೊಕ್ಕೊಟ್ಟಿನ ಹೋಲಿ ಏಂಜಲ್ ಪ್ರಾಥಮಿಕ ಶಾಲೆಯಲ್ಲಿ ಕವಿತಾ ಶಿಕ್ಷಕಿಯಾಗಿದ್ದರು. ಕವಿತಾ ಅವರು ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿದ್ದು ಮಗಳು ಸಂತ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ. ರಾಮನ ಬಗ್ಗೆ ಅವಹೇಳನಗೈದ ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಳು.
ಘಟನೆಯ ಬಳಿಕ ಫೆ.10 ರಂದು ಹಿಂದು ಸಂಘಟನೆಗಳ ಜೊತೆಗೆ ಡಿಡಿಪಿಐ ಕಚೇರಿಗೆ ಬಂದಿದ್ದ ಕವಿತಾ, ಹಿಂದು ಧರ್ಮ ಅವಹೇಳನ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದರು. ಈ ವೇಳೆ ಕವಿತಾ ಅವರು ಮಾತನಾಡಿದ್ದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾ ಅವರನ್ನು ಕ್ರೈಸ್ತ ಶಿಕ್ಷಣ ಸಂಸ್ಥೆ ಹೋಲಿ ಎಂಜಲ್ ಶಾಲೆಯ ಆಡಳಿತ ಮಂಡಳಿ ಕಿತ್ತು ಹಾಕಿದೆ. ಹೋಲಿ ಎಂಜಲ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದರು.
ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಹೋಲಿ ಎಂಜಲ್ ಶಾಲೆಯನ್ನು ನಡೆಸುತ್ತಿರುವ ಫಾದರ್ ಹೇಳಿದ್ದಾಗಿ ಕವಿತಾ ತಿಳಿಸಿದ್ದಾರೆ. ಅಲ್ಲದೆ, ಕವಿತಾ ಅವರ ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು ರಾತ್ರಿ ವೇಳೆ ವಾಟ್ಸಪ್ ನಂಬರಿಗೆ ಅಶ್ಲೀಲವಾಗಿ ಆಡಿಯೋ ಮೆಸೇಜ್ ಗಳನ್ನು ಹಾಕುತ್ತಿದ್ದಾರೆ. ಕತಾರ್ ದೇಶದಿಂದ ರಾತ್ರಿ ವೇಳೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಸೋಮವಾರ ರಾತ್ರಿ ದೂರು ನೀಡಿದ್ದಾರೆ.
Mangalore Gerosa school audio viral, teacher of Holy Angel school dismissed, teacher gets threat calls. The school dismissed teacher Kavitha for taking to media against the school as her daughter is studying at Gerosa.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm