ಬ್ರೇಕಿಂಗ್ ನ್ಯೂಸ್
20-02-24 03:19 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಕೋಟೆಕಾರು ಬಳಿಯ ಮಾಡೂರಿನ ಪಿಜಿಯೊಂದರಲ್ಲಿದ್ದು ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ವಿದ್ಯಾರ್ಥಿನಿ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ಮೂಲದ ಚೈತ್ರಾ ಹೆಬ್ಬಾರ್(27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಸ್ನೇಹಿತೆಯರೊಂದಿಗೆ ಚೈತ್ರಾ ನೆಲೆಸಿದ್ದಳು.
ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಕದ್ರಿಯಲ್ಲಿ ನೆಲೆಸಿರುವ ದೊಡ್ಡಪ್ಪನ ಆಶ್ರಯದಲ್ಲಿದ್ದು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17 ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.
ಚೈತ್ರಾ ನೆಲೆಸಿದ್ದ ಪಿಜಿಗೆ ಪುತ್ತೂರಿನ ಮುಸ್ಲಿಂ ಯುವಕನೋರ್ವ ಪದೇ ಪದೇ ಬರುತ್ತಿದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಆರೋಪಿಸಿ ಹಿಂದು ಸಂಘಟನೆಗಳ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿಷಯ ತಿಳಿದ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಅವರು ವಾರದ ಹಿಂದೆ ಚೈತ್ರಾಳ ದೊಡ್ಡಪ್ಪನಿಗೆ ಮಾಹಿತಿ ನೀಡಿದ್ದರು. ಫೆ.17 ರಂದು ಚೈತ್ರಾ ನಾಪತ್ತೆಯಾದ ವಿಚಾರ ತಿಳಿದ ದೊಡ್ಡಪ್ಪ ಮರುದಿನ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ, ಎಲ್ಲಿ ಹೋಗಿದ್ದಾಳೆಂದು ಗೊತ್ತಾಗಿಲ್ಲ. ಬಜರಂಗದಳ ಪ್ರಮುಖರು ಪುತ್ತೂರಿನ ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
Chaitra Hebbar, a 27-year-old Puttur native and PHD student, goes missing from Mangalore. She was pursuing a thesis in food security and living at a local PG in Derlakatte. It has been stated that she fled with her Muslim friend. Ullal police are currently investigating the case.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm