ಬ್ರೇಕಿಂಗ್ ನ್ಯೂಸ್
20-02-24 04:29 pm Mangalore Correspondent ಕರಾವಳಿ
ಮಂಗಳೂರು, ಫೆ.20: ಹಳೆಯ ಪಿಂಚಣಿ ಯೋಜನೆಯ (OPS) ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ.ಎಸ್.ಆರ್ ಹರೀಶ್ ಆಚಾರ್ಯ ದೂರಿದ್ದಾರೆ.
ಹಳೆಯ ಪಿಂಚಣಿ ವ್ಯವಸ್ಥೆಗೆ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾವಿರಾರು ಅರ್ಹ ಶಿಕ್ಷಕರು ಇದ್ದಾರೆ. ಏಪ್ರಿಲ್ 1, 2006 ರ ಪೂರ್ವದಿಂದಲೇ ಸೇವೆಯಲ್ಲಿದ್ದು ನಂತರದಲ್ಲಿ ಅನುದಾನಕ್ಕೊಳಪಟ್ಟ ಶಿಕ್ಷಕರು ಸಹಜವಾಗಿ ಹಳೆ ಪಿಂಚಣಿ ವ್ಯವಸ್ಥೆಗೆ ಅರ್ಹತೆಯನ್ನು ಹೊಂದಿದ್ದಾರೆ. ಹಾಗೆಯೇ ನಿಗದಿಪಡಿಸಿದ ದಿನಾಂಕದ ಪೂರ್ವದಿಂದಲೇ ಹಲವಾರು ಖಾಸಗಿ ಅನುದಾನಿತ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದ್ದು ನಂತರ ನೇಮಕಾತಿಯನ್ನು ಹೊಂದಿದ ಅರ್ಹ ಶಿಕ್ಷಕರೂ ಇದ್ದಾರೆ. ಇಂತಹ ಶಿಕ್ಷಕರು ಹಳೆಯ ಪಿಂಚಣಿ ವ್ಯವಸ್ಥೆಗೆ ಸಹಜವಾಗಿ ಅರ್ಹತೆ ಉಳ್ಳವರಾಗಿದ್ದಾರೆ. ಇದು ಸರಕಾರಕ್ಕೆ ಹೆಚ್ಚು ಆರ್ಥಿಕ ವೆಚ್ಚದಾಯಕವೂ ಅಲ್ಲ. ಆದುದರಿಂದ ಅಂಥವರಿಗೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಅನ್ವಯಿಸಿ ರಾಜ್ಯ ಸರಕಾರವು ಎಲ್ಲರಿಗೂ ಸಹಜ ನ್ಯಾಯವನ್ನು ಕಲ್ಪಿಸುವ ತತ್ವವನ್ನು ಪಾಲಿಸಬೇಕಾಗಿದೆ ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಪಿಂಚಣಿ ವ್ಯವಸ್ಥೆಯಲ್ಲಿ ಉದ್ಯೋಗಿಯ ಪಾಲು ಹೇಗೆಯೋ ಹಾಗೆಯೇ ಉದ್ಯೋಗದಾತನ ಪಾಲೂ ಇರುತ್ತದೆ. ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವೇತನದ ಅನುದಾನವನ್ನು ರಾಜ್ಯ ಸರಕಾರವು ನೀಡುತ್ತಿರುವುದರಿಂದ ಇಲ್ಲಿ ಸರಕಾರವೇ ಉದ್ಯೋಗದಾತನ ಪಾತ್ರವನ್ನು ನಿರ್ವಹಿಸಬೇಕಾಗುತ್ತದೆ. ಎಪ್ರಿಲ್ 1, 2006 ರ ನೇಮಕಾತಿ ಹಾಗೂ ಅನುದಾನಕ್ಕೆ ಒಳಪಟ್ಟ ಶಿಕ್ಷಕರಿಗೆ ಉದ್ಯೋಗದಾತನ ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು ಪಿಂಚಣಿಯ ಪಾಲನ್ನು ಒದಗಿಸಬೇಕೆಂದು ಸರಕಾರದ ನಿಯಮವಿದೆ. ಇದು ಸಮಂಜಸವೂ ಅಲ್ಲ. ಸಮರ್ಥನೀಯವೂ ಅಲ್ಲ. ಈ ವಿಷಯದಲ್ಲಿ ಅನಾವಶ್ಯಕವಾಗಿ ಸರಕಾರವು ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯೆಡೆಗೆ ಬೆರಳು ತೋರಿಸಿ ನುಣುಚಿಕೊಳ್ಳುವುದು ಸರಿಯಲ್ಲ. ಆದುದರಿಂದ ಪಿಂಚಣಿಗೆ ಬೇಕಾದ ಉದ್ಯೋಗದಾತನ ಪಾಲನ್ನೂ ಸರಕಾರವು ಒದಗಿಸಿ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೂ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
The State Government has issued an order to extend the old pension scheme (OPS) facility to all government employees notified before April 1, 2006 and subsequently appointed. Dr SR Harish Acharya, a former syndicate member of Mangalore University, alleged that the state government was adopting a step-motherly attitude towards aided teachers as it was trying to extend this facility to teachers serving in aided educational institutions.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm