ಬ್ರೇಕಿಂಗ್ ನ್ಯೂಸ್
20-02-24 05:37 pm Mangalore Correspondent ಕರಾವಳಿ
ಮಂಗಳೂರು, ಫೆ.20: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಆರೋಪದ ಬಗ್ಗೆ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ತನಿಖೆ ನಡೆಸುತ್ತಿದ್ದು, ಜಿಪಂ ಆವರಣದ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಕರು, ಪೋಷಕರು, ಹಿಂದು ಸಂಘಟನೆಗಳ ಪ್ರಮುಖರನ್ನು ಕರೆದು ಮಾಹಿತಿ ಸಂಗ್ರಹಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಜೆರೋಸಾ ಶಾಲೆಯ ಶಿಕ್ಷಕರು ಬಂದು ತನಿಖಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ವೇಳೆಗೆ ವಿಶ್ವ ಹಿಂದು ಪರಿಷತ್ ಮುಖಂಡರು ಬಂದು ದೂರು, ದುಮ್ಮಾನಗಳನ್ನು ಹೇಳಿದ್ದಾರೆ. ಮಧ್ಯಾಹ್ನ 12ರಿಂದ 2 ಗಂಟೆ ವರೆಗೆ ಹಿಂದು ಸಂಘಟನೆಗಳ ನಾಯಕರಿಗೆ ದೂರು ಹೇಳಿಕೊಳ್ಳಲು ಅವಕಾಶ ನೀಡಲಾಗಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್, ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದೇವೆ, ನಿಮಗೆ ಹೇಗೆ ಗೊತ್ತಾಯ್ತು ಅಂತ ಪ್ರಶ್ನೆ ಮಾಡಿದ್ರು. ಪೋಷಕರು ಕರೆ ಮಾಡಿ ವಿಷಯ ತಿಳಿಸಿದ್ದನ್ನು ಹೇಳಿದೆ. ನ್ಯಾಯ ಸಿಗುವ ಭರವಸೆ ಇದೆ ಎಂದರು.

ಮಾಧ್ಯಮಕ್ಕೆ ಹೇಳಿಕೆ ನೀಡಿದ ಪೋಷಕಿಯೊಬ್ಬರಿಗೆ ಜೀವ ಬೆದರಿಕೆ ಕರೆ ಮತ್ತು ಆಕೆಯನ್ನು ಹೋಲಿ ಏಂಜಲ್ ಶಿಕ್ಷಣ ಸಂಸ್ಥೆಯ ಶಿಕ್ಷಕ ಹುದ್ದೆಯಿಂದ ತೆಗೆದು ಹಾಕಿದ ಬಗ್ಗೆ ಕೇಳಿದ ಪ್ರಶ್ನೆಗೆ, ಶಿಕ್ಷಣ ಸಂಸ್ಥೆಯ ಈ ನಡೆಯನ್ನು ಖಂಡಿಸುತ್ತೇವೆ. ಮಕ್ಕಳಿಗಾದ ನೋವನ್ನು ಮಾಧ್ಯಮಕ್ಕೆ ಹೇಳಿದ್ದಾರೆ. ಅವರು ಹಿಂದು ಸಮಾಜದ ಪರವಾಗಿ ಕೆಲಸ ಮಾಡಿದ್ದಾರೆ. ಅವರಿಗಾದ ನೋವನ್ನು ಹಾಗೇ ಬಿಡುವುದಿಲ್ಲ. ಬೇರೆ ಶಾಲೆಯಲ್ಲಿ ಅವರಿಗೆ ಉದ್ಯೋಗ ತೆಗೆಸಿಕೊಡುತ್ತೇವೆ. ಜೀವ ಬೆದರಿಕೆ ಘಟನೆಯನ್ನು ಖಂಡಿಸುತ್ತೇನೆ ಎಂದು ಪುರುಷೋತ್ತಮ್ ಹೇಳಿದರು.


ಇವರ ಜೊತೆಗೆ ಅದೇ ಶಾಲೆಯಲ್ಲಿ ಕಲಿತಿದ್ದ ಈಗ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಂದಿದ್ದು, ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ. ಲಿಖಿತವಾಗಿಯೂ ದೂರು ನೀಡಿದ್ದೇನೆ. ಆ ಶಿಕ್ಷಕಿ ಇದು ಮೊದಲು ಹೇಳಿದ್ದಲ್ಲ. ನಾವು ಕಲಿಯುತ್ತಿದ್ದಾಗ ಸೋಶಿಯಲ್ ಸ್ಟಡೀಸ್ ಕಲಿಸುತ್ತಿದ್ದರು. ಆಗಲೂ ಹಿಂದು ದೇವರುಗಳನ್ನು ನಿಂದಿಸುತ್ತಿದ್ದರು. ಅದನ್ನು ಅಧಿಕಾರಿಗೆ ತಿಳಿಸಿದ್ದೇನೆ ಎಂದರು. ಸಂಜೆಯ ವೇಳೆಗೆ ಪೋಷಕರನ್ನು ಡಿಡಿಪಿಐ ಕಚೇರಿಗೆ ಕರೆದು ಅಧಿಕಾರಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಶಾಸಕರಿಗೆ ಮಧ್ಯಂತರ ಜಾಮೀನು
ಇದೇ ವೇಳೆ, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಅವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಲಭಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ವಿನಾಯ್ತಿ ಕೋರಿ ಶಾಸಕರಿಬ್ಬರು ಕೋರ್ಟ್ ಕದ ತಟ್ಟಿದ್ದರು.
Mangalore Gerosa School controversy, both MLA Vedavyas Kamath and Bharat Shetty gets bail, IAS officer investigates parents and VHP members who made remarks of wrong teaching about Hindu God's to students.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm