ಬ್ರೇಕಿಂಗ್ ನ್ಯೂಸ್
20-02-24 05:37 pm Mangalore Correspondent ಕರಾವಳಿ
ಮಂಗಳೂರು, ಫೆ.20: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಆರೋಪದ ಬಗ್ಗೆ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ತನಿಖೆ ನಡೆಸುತ್ತಿದ್ದು, ಜಿಪಂ ಆವರಣದ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಕರು, ಪೋಷಕರು, ಹಿಂದು ಸಂಘಟನೆಗಳ ಪ್ರಮುಖರನ್ನು ಕರೆದು ಮಾಹಿತಿ ಸಂಗ್ರಹಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಜೆರೋಸಾ ಶಾಲೆಯ ಶಿಕ್ಷಕರು ಬಂದು ತನಿಖಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ವೇಳೆಗೆ ವಿಶ್ವ ಹಿಂದು ಪರಿಷತ್ ಮುಖಂಡರು ಬಂದು ದೂರು, ದುಮ್ಮಾನಗಳನ್ನು ಹೇಳಿದ್ದಾರೆ. ಮಧ್ಯಾಹ್ನ 12ರಿಂದ 2 ಗಂಟೆ ವರೆಗೆ ಹಿಂದು ಸಂಘಟನೆಗಳ ನಾಯಕರಿಗೆ ದೂರು ಹೇಳಿಕೊಳ್ಳಲು ಅವಕಾಶ ನೀಡಲಾಗಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್, ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದೇವೆ, ನಿಮಗೆ ಹೇಗೆ ಗೊತ್ತಾಯ್ತು ಅಂತ ಪ್ರಶ್ನೆ ಮಾಡಿದ್ರು. ಪೋಷಕರು ಕರೆ ಮಾಡಿ ವಿಷಯ ತಿಳಿಸಿದ್ದನ್ನು ಹೇಳಿದೆ. ನ್ಯಾಯ ಸಿಗುವ ಭರವಸೆ ಇದೆ ಎಂದರು.

ಮಾಧ್ಯಮಕ್ಕೆ ಹೇಳಿಕೆ ನೀಡಿದ ಪೋಷಕಿಯೊಬ್ಬರಿಗೆ ಜೀವ ಬೆದರಿಕೆ ಕರೆ ಮತ್ತು ಆಕೆಯನ್ನು ಹೋಲಿ ಏಂಜಲ್ ಶಿಕ್ಷಣ ಸಂಸ್ಥೆಯ ಶಿಕ್ಷಕ ಹುದ್ದೆಯಿಂದ ತೆಗೆದು ಹಾಕಿದ ಬಗ್ಗೆ ಕೇಳಿದ ಪ್ರಶ್ನೆಗೆ, ಶಿಕ್ಷಣ ಸಂಸ್ಥೆಯ ಈ ನಡೆಯನ್ನು ಖಂಡಿಸುತ್ತೇವೆ. ಮಕ್ಕಳಿಗಾದ ನೋವನ್ನು ಮಾಧ್ಯಮಕ್ಕೆ ಹೇಳಿದ್ದಾರೆ. ಅವರು ಹಿಂದು ಸಮಾಜದ ಪರವಾಗಿ ಕೆಲಸ ಮಾಡಿದ್ದಾರೆ. ಅವರಿಗಾದ ನೋವನ್ನು ಹಾಗೇ ಬಿಡುವುದಿಲ್ಲ. ಬೇರೆ ಶಾಲೆಯಲ್ಲಿ ಅವರಿಗೆ ಉದ್ಯೋಗ ತೆಗೆಸಿಕೊಡುತ್ತೇವೆ. ಜೀವ ಬೆದರಿಕೆ ಘಟನೆಯನ್ನು ಖಂಡಿಸುತ್ತೇನೆ ಎಂದು ಪುರುಷೋತ್ತಮ್ ಹೇಳಿದರು.


ಇವರ ಜೊತೆಗೆ ಅದೇ ಶಾಲೆಯಲ್ಲಿ ಕಲಿತಿದ್ದ ಈಗ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಂದಿದ್ದು, ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ. ಲಿಖಿತವಾಗಿಯೂ ದೂರು ನೀಡಿದ್ದೇನೆ. ಆ ಶಿಕ್ಷಕಿ ಇದು ಮೊದಲು ಹೇಳಿದ್ದಲ್ಲ. ನಾವು ಕಲಿಯುತ್ತಿದ್ದಾಗ ಸೋಶಿಯಲ್ ಸ್ಟಡೀಸ್ ಕಲಿಸುತ್ತಿದ್ದರು. ಆಗಲೂ ಹಿಂದು ದೇವರುಗಳನ್ನು ನಿಂದಿಸುತ್ತಿದ್ದರು. ಅದನ್ನು ಅಧಿಕಾರಿಗೆ ತಿಳಿಸಿದ್ದೇನೆ ಎಂದರು. ಸಂಜೆಯ ವೇಳೆಗೆ ಪೋಷಕರನ್ನು ಡಿಡಿಪಿಐ ಕಚೇರಿಗೆ ಕರೆದು ಅಧಿಕಾರಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಶಾಸಕರಿಗೆ ಮಧ್ಯಂತರ ಜಾಮೀನು
ಇದೇ ವೇಳೆ, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಅವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಲಭಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ವಿನಾಯ್ತಿ ಕೋರಿ ಶಾಸಕರಿಬ್ಬರು ಕೋರ್ಟ್ ಕದ ತಟ್ಟಿದ್ದರು.
Mangalore Gerosa School controversy, both MLA Vedavyas Kamath and Bharat Shetty gets bail, IAS officer investigates parents and VHP members who made remarks of wrong teaching about Hindu God's to students.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm