ಬ್ರೇಕಿಂಗ್ ನ್ಯೂಸ್
21-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.21: ಧರ್ಮಸ್ಥಳದ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕೆಂದು ಸೌಜನ್ಯಾ ತಂದೆ ಚಂದಪ್ಪ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಆಲಿಸಿದ ನ್ಯಾಯಪೀಠ ರಾಜ್ಯ ಸರಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟೀಸ್ ಜಾರಿಗೊಳಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥ ಡಿಜಿಪಿ, ಅಪರಾಧ ವಿಭಾಗದ ಎಡಿಜಿಪಿ ಮತ್ತು ಐಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ಠಾಣೆ ಇನ್ಸ್ ಪೆಕ್ಟರ್ ಅವರಿಗೂ ಕೋರ್ಟ್ ನೋಟೀಸ್ ಮಾಡಿದೆ. ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ನೇಮಕ ಮಾಡಬೇಕು, ಅಲ್ಲದೆ, ನೈಜ ಆರೋಪಿಗಳ ಪತ್ತೆಯಾಗದಂತೆ ಸಾಕ್ಷ್ಯ ನಾಶ ಮಾಡಿರುವ ತನಿಖಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಕೇಳಿಕೊಂಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟೀಸ್ ಮಾಡಿದೆ.

ಈಗಾಗಲೇ ಪ್ರಕರಣದ ಆರೋಪಿಯೆಂದು ಗುರುತಿಸಿರುವ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಾಕಿಯಿದೆ. ಇದೇ ವೇಳೆ, ಮರು ತನಿಖೆಯ ಅರ್ಜಿಯನ್ನೂ ವಿಭಾಗೀಯ ಪೀಠದ ಮುಂದೆ ಇರಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಪೀಠವು, ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿ ಅವರಿಂದ ಅನುಮತಿ ಪಡೆಯುವಂತೆ ಕೋರ್ಟ್ ರಿಜಿಸ್ಟ್ರಾರ್ ಗೆ ಸೂಚಿಸಿದೆ.
2012ರ ಅಕ್ಟೋಬರ್ 9ರಂದು ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾಳನ್ನು ಧರ್ಮಸ್ಥಳ ಬಳಿಯ ಪಾಂಗಾಳದಲ್ಲಿ ಅಪಹರಿಸಿದ್ದ ತಂಡವು ಸಾಮೂಹಿಕ ಅತ್ಯಾಚಾರಗೈದು ಬರ್ಬರವಾಗಿ ಹತ್ಯೆಗೈದು ರಾತ್ರಿ ವೇಳೆ ಅದೇ ಸ್ಥಳದಲ್ಲಿ ಶವವನ್ನು ಎಸೆದಿತ್ತು. ಘಟನೆ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್ ನನ್ನು ಆರೋಪಿಯೆಂದು ಬಂಧಿಸಿದ್ದರು. ಆನಂತರ, ಜನಾಕ್ರೋಶಕ್ಕೆ ಹೆದರಿ ತನಿಖೆಯನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಿತ್ತು. ತನಿಖೆ ಪೂರ್ತಿಗೊಳಿಸಿದ ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ನನ್ನೇ ಆರೋಪಿಯೆಂದು ದೋಷಾರೋಪ ಸಲ್ಲಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಕ್ಷ್ಯಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ 2023ರ ಜೂನ್ 16ರಂದು ಬಿಡುಗಡೆ ಮಾಡಿತ್ತು.
The Karnataka High Court issued notice to the state police chief and the CBI on a petition filed by Chandappa Gowda from Dharmasthala of Dakshina Kannada district, seeking directions to the CBI to conduct fresh investigation by constituting a Special Investigation Team (SIT) into the brutal rape and murder of his minor daughter, Sowjanya, in 2012, to ensure that the actual perpetrators are booked and prosecuted, to render justice to the victim.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm