ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm