ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm