ಬ್ರೇಕಿಂಗ್ ನ್ಯೂಸ್
23-02-24 08:01 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
Mangalore Anil John Sequeira becomes youngest civil judge in Karnataka at age of 25. Anil John Sequeira, hailing from Borimar in Bantwal taluk, has secured success in the Karnataka Civil Judge Examination 2023, clearing the Prelims, Mains, and the interview at the young age of 25. This makes him the youngest Civil Judge (Judicial Magistrate) in the state of Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am