ಬ್ರೇಕಿಂಗ್ ನ್ಯೂಸ್
23-02-24 08:01 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
Mangalore Anil John Sequeira becomes youngest civil judge in Karnataka at age of 25. Anil John Sequeira, hailing from Borimar in Bantwal taluk, has secured success in the Karnataka Civil Judge Examination 2023, clearing the Prelims, Mains, and the interview at the young age of 25. This makes him the youngest Civil Judge (Judicial Magistrate) in the state of Karnataka.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm