ಬ್ರೇಕಿಂಗ್ ನ್ಯೂಸ್
23-02-24 08:01 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
Mangalore Anil John Sequeira becomes youngest civil judge in Karnataka at age of 25. Anil John Sequeira, hailing from Borimar in Bantwal taluk, has secured success in the Karnataka Civil Judge Examination 2023, clearing the Prelims, Mains, and the interview at the young age of 25. This makes him the youngest Civil Judge (Judicial Magistrate) in the state of Karnataka.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm