ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm