ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm