ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm