ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am