ಬ್ರೇಕಿಂಗ್ ನ್ಯೂಸ್
01-03-24 10:13 am Mangalore Correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರಿನಲ್ಲಿ ಉದಯವಾಣಿಯಂದ್ರೆ ಮನೋಹರ ಪ್ರಸಾದ್ ಎಂಬಷ್ಟರ ಮಟ್ಟಿಗೆ ಪ್ರಸಿದ್ಧಿ ಗಳಿಸಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (65) ನಮ್ಮನ್ನಗಲಿದ್ದಾರೆ. ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಎಂಬ ಪುಟ್ಟ ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪಿಯುಸಿ, ಪದವಿ ಶಿಕ್ಷಣ ಪೂರೈಸಿ ಅಂದಿನ ‘ನವಭಾರತ’ ಪತ್ರಿಕೆಯಲ್ಲಿ ಕೆಲಸ ಆರಂಭಿಸಿದ್ದರು. ಆನಂತರ, ಕರಾವಳಿಯ ಜನಪ್ರಿಯ ಉದಯವಾಣಿ ಪತ್ರಿಕೆ ಸೇರ್ಪಡೆಯಾಗಿ ಮಂಗಳೂರು ವಿಭಾಗದ ಮುಖ್ಯ ವರದಿಗಾರರಾಗಿ, ವಿಭಾಗದ ಮುಖ್ಯಸ್ಥರಾಗಿದ್ದರು. 36 ವರ್ಷಗಳ ಸುದೀರ್ಘ ಸೇವೆಯ ಬಳಿಕ ಸಹಾಯಕ ಸಂಪಾದಕರಾಗಿ ಎರಡು ವರ್ಷಗಳ ಹಿಂದೆ ವೃತ್ತಿಗೆ ವಿದಾಯ ಹೇಳಿದ್ದರು.
ವೃತ್ತಿಯ ಜೊತೆಗೆ ಕತೆಗಾರರಾಗಿ, ಕವಿಯಾಗಿ, ಉತ್ತಮ ವಾಗ್ಮಿಯಾಗಿದ್ದರೂ ಮನೋಹರ ಪ್ರಸಾದ್ ಅಹಂ ಇಲ್ಲದೆ, ಎಲ್ಲರೊಂದಿಗೂ ಬೆರೆಯುತ್ತಿದ್ದವರು. ಅಗಾಧ ನೆನಪಿನ ಶಕ್ತಿ ಅವರ ದೊಡ್ಡ ಪ್ಲಸ್ ಆಗಿತ್ತು. 30 ವರ್ಷಗಳ ಹಿಂದಿನ ಘಟನೆಯನ್ನೂ ಇಸವಿ, ದಿನಾಂಕದ ಜೊತೆ ಸಚಿತ್ರ ವಿವರದಂತೆ ಮುಂದಿಡುತ್ತಿದ್ದರು. ಹಾಗಾಗಿ ಅವರ ಭಾಷಣಗಳೇನಿದ್ದರೂ ಬೋರ್ ಹೊಡೆಸುತ್ತಿರಲಿಲ್ಲ. ವಿಮಾನ ದುರಂತ, ನಕ್ಸಲ್ ಚಟುವಟಿಕೆಯಂತಹ ಅಪರೂಪದ ಘಟನೆಗಳ ಸಂದರ್ಭದಲ್ಲಿ ಕಾಡು ಮೇಡು ಸುತ್ತಿಯೇ ವರದಿಗಳನ್ನು ಬರೆಯುತ್ತಿದ್ದವರು. ತನ್ನೊಂದಿಗಿದ್ದವರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿದ್ದ ಅಪರೂಪದ ಮನುಷ್ಯ.
ಮನೋಹರ ಪ್ರಸಾದ್ ಬೆಂಗಳೂರಿನ ಟಿವಿ ಮಾಧ್ಯಮದಲ್ಲಿ ಇರುತ್ತಿದ್ದರೆ ರಾಜ್ಯ ಮಟ್ಟದಲ್ಲಿ ಮಿಂಚುತ್ತಿದ್ದರು ಎನ್ನುವ ಭಾವನೆಗಳಿದ್ದವು. ಗಡಸು ಧ್ವನಿ, ಕನ್ನಡ, ಇಂಗ್ಲಿಷ್ ಎರಡು ಭಾಷೆಯಲ್ಲೂ ನಿರರ್ಗಳವಾಗಿ ಮಾತನಾಡುತ್ತಿದ್ದ ಪ್ರತಿಭೆ ಕರಾವಳಿಯ ಕನ್ನಡ ಪತ್ರಿಕೋದ್ಯಮದಲ್ಲಿ ಮತ್ತೊಬ್ಬರಿಲ್ಲ. ಅವರಿದ್ದಷ್ಟು ಕಾಲವೂ ಉದಯವಾಣಿಗೆ ಒಂದಷ್ಟು ಖದರ್ ಇತ್ತು. ಮನೋಹರಣ್ಣ ಈಗ ಇಲ್ಲ ಎನ್ನುವುದನ್ನೇ ಅರಗಿಸಿಕೊಳ್ಳಲು ಆಗಲ್ಲ. ಮನೋಹರ ಪ್ರಸಾದ್ ವಿಶೇಷ ಅಂದ್ರೆ, ಮದುವೆಯಾಗದೆ ಮಂಗಳೂರಿನಲ್ಲಿ ಒಬ್ಬಂಟಿಯಾಗೇ ಜೀವನ ನಡೆಸಿದ್ದರು. ಮನೆ ಕೆಲಸಕ್ಕೆ ಅಂತಷ್ಟೇ ಕೂಲಿಗೆ ಇಟ್ಟುಕೊಂಡಿದ್ದರು. ಕಾಲು ನೋವಿದ್ದರೂ ಇತ್ತೀಚಿನ ವರೆಗೂ ಕಾರ್ಯಕ್ರಮ ನಿರೂಪಣೆಗೆ, ಪ್ರಮುಖ ಕಾರ್ಯಕ್ರಮಗಳಿಗೆ ಬರುತ್ತಿದ್ದರು.
Renowned journalist, compere, storywriter and poet Manohar Prasad passed away early in the morning on Friday March 1. He was 64. Originally from Karkala taluk, Manohar Prasad, a native of Karualu village, completed his college education in Mangaluru and started his career as a journalist in ‘Nava Bharat’ newspaper. Later, he joined Udayavani as a reporter from Mangaluru.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm