ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am