ಬ್ರೇಕಿಂಗ್ ನ್ಯೂಸ್
02-03-24 05:05 pm Mangalore Correspondent ಕರಾವಳಿ
ಉಳ್ಳಾಲ, ಮಾ.2: ಉಳ್ಳಾಲದ ಮಾಡೂರಿನ ಪಿಜಿ ಯಿಂದ ನಾಪತ್ತೆಯಾಗಿದ್ದ ಪಿ.ಎಚ್.ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಗಲ್ಫ್ ರಾಷ್ಟ್ರದ ಕತಾರ್ ತೆರಳಿದ್ದಾಳೆ ಎನ್ನಲಾಗುತ್ತಿದ್ದು, ಆಕೆಯ ಪ್ರಿಯಕರ ಶಾರೂಕ್ ನನ್ನ ಉಳ್ಳಾಲ ಪೊಲೀಸರು ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ.
ಪುತ್ತೂರಿನ ಪುರುಷರಕಟ್ಟೆ ನಿವಾಸಿ ಚೈತ್ರಾ ಹೆಬ್ಬಾರ್ ತನ್ನ ಪ್ರಿಯಕರ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಶಾರೂಕ್ ಶೇಖ್ ನೆರವಿನಲ್ಲಿ ವಿದೇಶಕ್ಕೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದಾಳೆ ಎಂಬ ಮಾಹಿತಿ ಲಭಿಸಿದೆ. ದೇರಳಕಟ್ಟೆಯ ಖಾಸಗಿ ವಿ.ವಿಯಲ್ಲಿ ಪಿ.ಎಚ್.ಎಡಿ ವ್ಯಾಸಂಗ ಮಾಡುತ್ತಿದ್ದ ಚೈತ್ರಾ ಹೆಬ್ಬಾರ್ ಕಳೆದ ಫೆ.17 ರಂದು ತಾನು ನೆಲೆಸಿದ್ದ ಕೋಟೆಕಾರು ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರ್ ಸಮೇತ ನಾಪತ್ತೆಯಾಗಿದ್ದಳು. ಫೆ.18 ಕ್ಕೆ ಶಾರೂಕ್ ಶೇಖ್ ಕೂಡಾ ನಾಪತ್ತೆಯಾಗಿದ್ದ. ಚೈತ್ರಾಳ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಬೆಂಗಳೂರಿಗೆ ತೆರಳಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾನಾಯಕ್ ಮತ್ತು ಉಳ್ಳಾಲ ಪಿಎಸ್ ಐ ಶೀತಲ್ ಅಲಗೂರ ನೇತೃತ್ವದ ತಂಡ ಚೈತ್ರಾ ಹೆಬ್ಬಾರ್ ಬೆನ್ನು ಬಿದ್ದಿದ್ದು, ಚೈತ್ರಾ ಬೆಂಗಳೂರಿಂದ ಗೋವಾ- ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶದ ಮನಾಲಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಚೈತ್ರಾ ಹೆಬ್ಬಾರ್ 40,000 ರೂಪಾಯಿಗಳನ್ನ ತನ್ನ ಖಾತೆಯಿಂದ ವಿತ್ ಡ್ರಾ ಮಾಡಿ ಹಿಮಾಚಲ ಪ್ರದೇಶದಿಂದ ದೆಹಲಿ ವಿಮಾನ ನಿಲ್ದಾಣದಕ್ಕೆ ತೆರಳಿ ಕತಾರ್ ದೇಶಕ್ಕೆ ಹಾರಿದ್ದಾಳೆ.
ಚೈತ್ರಾಳ ಪ್ರಿಯಕರ ಶಾರೂಕನ್ನ ಪೊಲೀಸರು ಕಳೆದ ಗುರುವಾರ ಹಿಮಾಚಲ ಪ್ರದೇಶದಲ್ಲಿ ಪತ್ತೆ ಹಚ್ಚಿ ಉಳ್ಳಾಲ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಶಾರೂಕ್ ತಾನು ಚೈತ್ರಾ ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಶಾರೂಕನ್ನ ವಿಚಾರಣೆ ನಡೆಸಿದ ಪೊಲೀಸರು ಪ್ರಾಯ ಪ್ರಬುದ್ಧರು ಎನ್ನುವ ಕಾರಣಕ್ಕೆ ಆತನನ್ನ ಬಿಟ್ಟು ಕಳಿಸಿದ್ದಾರೆ. ಶಾರೂಕ್ ಈ ಹಿಂದೆ ವಿದೇಶದಲ್ಲಿದ್ದು ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ. ಈ ಹಿನ್ನಲೆಯಲ್ಲಿ ಶಾರೂಕ್ ಗೆ ಚೈತ್ರಾ ಜತೆ ಕತಾರ್ಗೆ ತೆರಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಆದರೆ ಚೈತ್ರಾಳಿಗೆ ತರಾತುರಿಯಲ್ಲಿ ವಿದೇಶದಿಂದ ವಿಸಿಟಿಂಗ್ ವೀಸಾ ಕಳಿಸಿದ್ದಾದರೂ ಯಾರೆಂಬುದು ಅನುಮಾನಕ್ಕೆ ಕಾರಣವಾಗಿದೆ. ಚೈತ್ರಾ ಕತಾರ್ಗೆ ಹಾರಲು ಆಕೆಯ ಪ್ರಿಯಕರ ಶಾರೂಕ್ ಶೇಖ್ ಸಹಕರಿಸಿರುವ ದಟ್ಟ ಶಂಕೆ ವ್ಯಕ್ತವಾಗಿದೆ. ಚೈತ್ರಾ ಸದ್ಯ ಕತಾರ್ ದೇಶದ ಹೆಣ್ಮಕ್ಕಳ ಪಿ.ಜಿ ಒಂದರಲ್ಲಿ ನೆಲೆಸಿದ್ದಾಳೆಂದು ತಿಳಿದು ಬಂದಿದೆ. ಕತಾರ್ ದೇಶದ ಇಂಡಿಯನ್ ಎಂಬೇಸಿಯಿಂದ ಚೈತ್ರಾ ಉಳ್ಳಾಲ ಪೊಲೀಸರಿಗೆ ಇ-ಮೇಲ್ ಮತ್ತು ವಾಟ್ಸಪ್ ಸಂದೇಶ ಕಳಿಸಿದ್ದು ನಾನು ಪ್ರಬುದ್ಧಳಾಗಿದ್ದೇನೆ. ನನ್ನ ಇಷ್ಟದಲ್ಲಿ ನಾನು ಬಂದಿದ್ದೇನೆ. ನನಗೆ ಪ್ರೀತಿ ಮಾಡುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾಳೆ ಎಂದು ಪೊಲೀಸ್ ಮೂಲದಿಂದ ತಿಳಿದುಬಂದಿದೆ.
ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣವನ್ನ ಭೇದಿಸುವಂತೆ ಉಳ್ಳಾಲ ಪೊಲೀಸರಿಗೆ ಹಿಂದೂ ಸಂಘಟನೆಗಳು ಒತ್ತಡ ಹಾಕಿದ್ದು ಪೊಲೀಸರಿಗೂ ಚೈತ್ರಾ ನಡೆ ತಲೆ ಬಿಸಿ ತಂದೊಡ್ಡಿದೆ.
Mangalore student Chaitra Hebbar missing case, Muslim youth has been caught by Ullal Police at Himachal Pradesh and later has sent after investigating. It is said Chaitra has escaped to Qatar by making visa. Chaitra Hebbar, a 27-year-old Puttur native and PHD student, goes missing from Mangalore
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm