ಬ್ರೇಕಿಂಗ್ ನ್ಯೂಸ್
02-03-24 08:37 pm Mangalore Correspondent ಕರಾವಳಿ
ಮಂಗಳೂರು, ಮಾ.2: ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿರುವ ಅರುಣ್ ಪುತ್ತಿಲ ಮತ್ತು ಇತರರು ಪಕ್ಷಕ್ಕೆ ಸೇರಲು ಮುಕ್ತ ಆಹ್ವಾನ ನೀಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ತತ್ವ ಸಿದ್ಧಾಂತ ಒಪ್ಪುವ ಪ್ರತಿಯೊಬ್ಬರನ್ನೂ ಬಿಜೆಪಿಗೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸತೀಶ್ ಕುಂಪಲ, ಜಾಲತಾಣದಲ್ಲಿ ಕೆಲವು ಕಡೆ ಅರುಣ್ ಪುತ್ತಿಲ ಸೇರ್ಪಡೆಗೆ ಬಿಜೆಪಿಯಲ್ಲಿಯೇ ವಿರೋಧ ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಪುತ್ತೂರಿನಲ್ಲಿಯೂ ಪಕ್ಷದ ಪ್ರಮುಖರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜ್ಯಾಧ್ಯಕ್ಷರು ಮತ್ತು ಸಂಘಟನಾ ಕಾರ್ಯದರ್ಶಿ ಹಲವು ಬಾರಿ ಮಾತುಕತೆ ನಡೆಸಿದ್ದು ಅವರಿಗೆ ಪಕ್ಷ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಿದ್ದ ಮೇಲೂ ಪಕ್ಷ ಸೇರದೇ ಇರುವುದಕ್ಕೆ ಅವರೇ ಕಾರಣ ಕೊಡಬೇಕು ಎಂದರು.
ಹುದ್ದೆಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಮಾತುಕತೆ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ ಅಥವಾ ಮಂಡಲಾಧ್ಯಕ್ಷ ಹುದ್ದೆಯ ಬಗ್ಗೆ ಅಪೇಕ್ಷೆ ಇಟ್ಟಿದ್ದಾರೆ. ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಷರತ್ತು ಮುಂದಿಟ್ಟು ಪಕ್ಷಕ್ಕೆ ಬರುತ್ತೇನೆ ಎನ್ನುವುದು ಸರಿಯಲ್ಲ. ಪಕ್ಷ ಸೇರಿದ ಬಳಿಕ ಅವರಿಗೆ ತಕ್ಕುದಾದ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಅರುಣ್ ಪುತ್ತಿಲ ಒಬ್ಬ ರಾಷ್ಟ್ರೀಯವಾದಿ. ಮೋದಿ ಪ್ರಧಾನಿಯಾಗಬೇಕೆಂದು ಅವರಲ್ಲೂ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಜಿಲ್ಲೆಯಲ್ಲಿ ಮುನಿಸು ಇರುವವರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಕ್ಷ ಸೇರುವಾಗ ನೇರವಾಗಿ ಬಂದು ಸೇರಿಕೊಳ್ಳಲಿ. ಹುದ್ದೆಯನ್ನು ಆಬಳಿಕ ಪಕ್ಷ ತೀರ್ಮಾನಿಸುತ್ತದೆ ಎಂಬುದನ್ನು ಹೇಳಬಯಸುತ್ತೇನೆ ಎಂದರು.
The BJP said here on Saturday that the door is open for Sangh Parivar activist Arun Kumar Puthila to join the party without imposing any condition. As a rebel (Independent) candidate in the last Assembly elections from Puttur, Mr. Puthila came second, relegating the BJP to third.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm