ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am