ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm