ಬ್ರೇಕಿಂಗ್ ನ್ಯೂಸ್
03-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಜಿಲ್ಲಾ ಸಮಾವೇಶದಿಂದ ದೂರವುಳಿದಿದ್ದು, ಕಾರ್ಯಕ್ರಮವನ್ನು ಕೊನೆಕ್ಷಣದಲ್ಲಿ ರದ್ದು ಮಾಡಲಾಗಿದೆ.
ಇತ್ತೀಚೆಗೆ ಮೀನಾಕ್ಷಿ ಲೇಖಿ ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ರದ್ದುಗೊಂಡಿದ್ದರಿಂದ ಮತ್ತೆ ಮೀನಾಕ್ಷಿ ಲೇಖಿ ಕಾರ್ಯಕ್ರಮವನ್ನು ಮಾ.4ರಂದು ಸಂಘ ನಿಕೇತನದಲ್ಲಿಯೇ ಆಯೋಜಿಸಲಾಗಿತ್ತು. ತರಾತುರಿಯಲ್ಲಿ ಶನಿವಾರ ಅಂತಿಮಗೊಳಿಸಿ ಅದಕ್ಕಾಗಿ ಸಿದ್ಧತೆಯನ್ನೂ ಮಾಡಲಾಗಿತ್ತು. ಆದರೆ, ಮೀನಾಕ್ಷಿ ಲೇಖಿ ಬರುವುದಿಲ್ಲ ಎಂಬ ವಿಚಾರ ತಿಳಿದ ಜಿಲ್ಲಾ ಬಿಜೆಪಿ ಕೊನೆಕ್ಷಣದಲ್ಲಿ ಭಾನುವಾರ ಸಂಜೆ ಕಾರ್ಯಕ್ರಮವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿರುವುದಾಗಿ ಪ್ರಕಟಿಸಿದೆ. ಶನಿವಾರ ಪ್ರಕಟವಾದ 195 ಅಭ್ಯರ್ಥಿಗಳಲ್ಲಿ ದೆಹಲಿಯ ನಾಲ್ವರು ಸಂಸದರಿಗೆ ಕೊಕ್ ನೀಡಲಾಗಿದೆ. ಅದರಲ್ಲಿ ಹಾಲಿ ವಿದೇಶಾಂಗ ಇಲಾಖೆಯ ಸಹಾಯಕ ಸಚಿವೆಯಾಗಿರುವ ಮೀನಾಕ್ಷಿ ಲೇಖಿ ಕೂಡ ಒಬ್ಬರಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರೂ ಆಗಿರುವ ಮೀನಾಕ್ಷಿ ಲೇಖಿ 2014 ಮತ್ತು 2019ರಲ್ಲಿ ದೆಹಲಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಈ ಬಾರಿ ವಿರೋಧಿ ಅಲೆ ಎದುರಿಸುತ್ತಿರುವ ಕಾರಣದಿಂದಾಗಿ ಲೇಖಿ ಅವರನ್ನು ಬದಲಿಸಲಾಗಿದ್ದು, ಆ ಸ್ಥಾನವನ್ನು ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಮಗಳು 39 ವರ್ಷದ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇದರಿಂದ ಸಿಟ್ಟಿನಲ್ಲಿರುವ ಮೀನಾಕ್ಷಿ ಲೇಖಿ ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಮಂಗಳೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಗಿದ್ದರಿಂದ ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಉಡುಪಿಯಲ್ಲೂ ಚಿಂತನ ಗಂಗ ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಸಿಂಗ್ ಅವರಿಗೂ ದೆಹಲಿಯಲ್ಲಿ ಟಿಕೆಟ್ ಮಿಸ್ ಆಗಿದೆ. ಟಿಕೆಟ್ ತಪ್ಪಿದ ಸಂಸದರನ್ನು ದೆಹಲಿಯಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಲು ಕಳಿಸುವ ಸಾಧ್ಯತೆಯಿದೆ.
Union Minister and two-time MP Meenakshi Lekhi has failed to get a BJP ticket from Delhi Central constituency. Angry over not getting a seat, he stayed away from the district convention of booth-level workers organised in Mangaluru and the programme was cancelled at the last minute.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm