ಬ್ರೇಕಿಂಗ್ ನ್ಯೂಸ್
04-03-24 03:00 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಕೊಂಡಾಣ ಕ್ಷೇತ್ರದ ಭಂಡಾರಮನೆಯನ್ನು ಪುಡಿಗೈದ ರಾಕ್ಷಸರನ್ನ ಕೆಲವೇ ಗಂಟೆಗಳಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಳಿಸಲು ಉಳ್ಳಾಲದ ಶಾಸಕ ಖಾದರ್ ಹೊರತುಪಡಿಸಿ ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿಂದು ಧಾರ್ಮಿಕ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆರೋಪಿಸಿದ್ದಾರೆ.
ಕೋಟೆಕಾರು ಪಟ್ಟಣದ ಶ್ರೀ ಕ್ಷೇತ್ರ ಕೊಂಡಾಣದ ಭಂಡಾರಮನೆಯ ಕಟ್ಟಡ ಧ್ವಂಸ ಪ್ರಕರಣದ ಆರೋಪಿಗಳು, ಸಹಕರಿಸಿದ ಪಟಲಾಂ ವಿರುದ್ಧ ಹಾಗೂ ಕ್ಷೇತ್ರದ ಭಂಡಾರಮನೆ ರಕ್ಷಣೆ, ಒಡವೆಗಳ ರಕ್ಷಣೆ ಕುರಿತಾಗಿ ಆಗ್ರಹಿಸಿ ಕೋಟೆಕಾರು ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ತಮಗೆ ಬೇಕಾದಷ್ಟು ಸ್ವಾಹ ಮಾಡಲು ಅಸ್ತ್ರವಾಗಿ ಬಳಸಿದ ಕ್ಷೇತ್ರದ ಆಡಳಿತ ತಮ್ಮ ಅಧೀನದಲ್ಲಿ ಇಲ್ಲ ಎಂಬ ಸ್ವಾರ್ಥಕ್ಕೆ ಭಂಡಾರಮನೆಯನ್ನೇ ಪುಡಿಗೈದಿರುವ ಮುತ್ತಣ್ಣ ಶೆಟ್ಟಿ ಮತ್ತು ಪಟಾಲಮಿನ ಕಿಡಿಗೇಡಿ ಕೃತ್ಯ ಅತೀ ಖಂಡನೀಯ. ಇಂತಹ ರಾಕ್ಷಸರನ್ನ ರಾತ್ರೋ ರಾತ್ರಿ ಜಾಮೀನಿನಲ್ಲಿ ಬಿಡುಗಡೆಗೊಳಿಸಲು ಕ್ಷೇತ್ರದ ಶಾಸಕ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅವರ ಕೈವಾಡ ಇದೆ ಎಂದು ಆರೋಪಿಸಿದರು.


ಹಿಂದೂ ಮುಖಂಡ, ವಕೀಲ ಜಗದೀಶ ಶೇಣವ ಮಾತನಾಡಿ ಅನ್ಯಮತೀಯ ಬಾಬರ ಒಡೆದ ರಾಮ ಮಂದಿರ ಮತ್ತೆ ಪ್ರತಿಷ್ಠಾಪನೆ ಮಾಡಲು ಐನೂರು ವರ್ಷ ಬೇಕಾಯಿತು. ಆದರೆ ಹಿಂದೂ ಆಗಿ ಕೊಂಡಾಣ ಕ್ಷೇತ್ರದ ಅನ್ನ ತಿಂದು ಭಂಡಾರ ಮನೆಯನ್ನೇ ಕೆಡವಿದ ಮುತ್ತಣ್ಣ ಶೆಟ್ಟಿ ಒಬ್ಬ ರಾಕ್ಷಸ ಎಂದರು. ಕೊಂಡಾಣ ಕ್ಷೇತ್ರ ಮುತ್ತಣ್ಣ ಶೆಟ್ಟರ ಕುಟುಂಬದ ಆಸ್ತಿ ಅಲ್ಲ. ಹಿಂದೂ ಸಮಾಜದ ಯಾರೂ ಕೂಡ ಮುತ್ತಣ್ಣ ಶೆಟ್ಟರನ್ನು ಯಾವುದೇ ಕಾರ್ಯಕ್ರಮಕ್ಕೆ ಆಮಂತ್ರಿಸಬಾರದು. ಧರ್ಮದ್ರೋಹಿಯಾಗಿರುವ ಅವರಿಂದಲೇ ಮೂವತ್ತು ಲಕ್ಷ ರೂಪಾಯಿ ವೆಚ್ಚದ ಕಟ್ಟಡ ನಿರ್ಮಾಣ ವೆಚ್ಚವನ್ನು ಭರಿಸುವಂತೆ ಮುಜರಾಯಿ ಇಲಾಖೆ ಕ್ರಮ ಜರಗಿಸಬೇಕು. ಪೊಲೀಸರು ಇಂತಹ ರಾಕ್ಷಸರ ವಿರುದ್ಧ ಸರಳ ಸೆಕ್ಷನ್ ಹಾಕಲು ಶಾಸಕ ಖಾದರ್ ಅವರ ಒತ್ತಡವೇ ಕಾರಣ ಎಂದರು.
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರು, ಮಾಜಿ ಸದಸ್ಯೆ ದಿನಮಣಿ ರಾವ್, ವಿ.ಹಿಂ.ಪ ಮುಖಂಡ ಗೋಪಾಲ ಕುತ್ತಾರು, ಬಜರಂಗದಳ ಪ್ರಮುಖರಾದ ಅರ್ಜುನ್ ಮಾಡೂರು ಮೊದಲಾದವರು ಪ್ರತಿಭಟನೆಯಲ್ಲಿ ಇದ್ದರು. ಭಾನುವಾರ ಕೊಂಡಾಣದ ಭಂಡಾರ ಮನೆಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ನೀಡಿದ ದೂರಿನ ಆಧಾರದ ಮೇಲೆ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬಳಿಕ ಕ್ಷೇತ್ರದ ಗುರಿಕಾರ ಮುತ್ತಣ್ಣ ಶೆಟ್ಟಿ, ಧೀರಜ್ ಮತ್ತು ಶಿವರಾಜ್ ಎಂಬ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಬೇಲ್ ನೀಡಿ ಬಿಡುಗಡೆಗೊಳಿಸಲಾಗಿದೆ. ಕೃತ್ಯಕ್ಕೆ ಬಳಸಲಾದ ಜೆಸಿಬಿಯನ್ನ ಉಳ್ಳಾಲ ಪೊಲೀಸರು ಇನ್ನೂ ವಶಪಡಿಸಿರದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Mangalore Kotelar Kondana temple house demolish, three accused get bail within hours of arrest. Speaker MLA Ut Khader pressure over police offcers reason says temple authorities.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm