ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm