ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm